Breaking News

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

Spread the love

ಬೆಂಗಳೂರು: ಬಿಜೆಪಿ ಶಾಸಕರ ಎಡಗೈ ಬಂಟ, ಬಲಗೂ ಬಂಟರನ್ನು ಹಿಡಿದಿದ್ದೇವೆ ಎಂದು ಹೇಳಿರುವ ಕಾಂಗ್ರೆಸ್‌ ಶಾಸಕರೊಬ್ಬರು ದೊಡ್ಡ ತಿಮಿಂಗಲ ಎಂದಿದ್ದಾರೆ. ನಮ್ಮ ರಾಜ್ಯದ ದೊಡ್ಡ ತಿಮಿಂಗಲ ಯಾರು ಎಂಬುದು ಜನರಿಗೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು.

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

ನನ್ನ ಜೀವನ ತೆರೆದ ಪುಸ್ತಕ. ನನ್ನ ವೈಯಕ್ತಿಕ ಜೀವನದ ಬಗ್ಗೆ ವಿಧಾನಸಭೆ ಕಲಾಪಗಳಲ್ಲೇ ಪ್ರಸ್ತಾಪಿಸಿದ್ದೇನೆ. ನಾನು ನೋವು ನುಂಗಿದ್ದೇನೆಯೇ ಹೊರತು, ಜನರಿಗೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ. ನೋವು ಕೊಟ್ಟಿಲ್ಲ. ಕಾನೂನುಬಾಹಿರ ನಡವಳಿಕೆ ನನ್ನದಲ್ಲ. ವರ್ಗಾವಣೆ ವಿಚಾರದಲ್ಲಿ ಅನೇಕ ಅಧಿಕಾರಿಗಳು ನೋವಿನಲ್ಲಿದ್ದಾರೆ. ಅದಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ ಅಂದೇ ತೋರಿಸಿದ್ದೇನೆ. ಅದನ್ನು ಬಿಡುಗಡೆ ಮಾಡುವ ಕಾಲವೂ ದೂರವಿಲ್ಲ. ದೊಡ್ಡ ತಿಮಿಂಗಲದ ಆಡಿಯೋ ಹೊರಬರುತ್ತಿದ್ದಂತೆ ದೇವರಾಜೇಗೌಡ ಬಂಧನ ಆಯಿತು. ಭ್ರಷ್ಟಾಚಾರದ ಪಾಲುದಾರರ ವಿರುದ್ಧ ಕ್ರಮ ತೆಗೆದುಕೊಳ್ಳುವ ಶಕ್ತಿ ಸರ್ಕಾರಕ್ಕಿದ್ದರೆ ನಾನೂ ಪೆನ್‌ಡ್ರೈವ್‌ ಬಿಡುಗಡೆ ಮಾಡುತ್ತೇನೆ. ಸರ್ಕಾರದಲ್ಲೇ ಇರುವ ದೊಡ್ಡ ತಿಮಿಂಗಲವನ್ನು ಇವರು ಎಲ್ಲಿ ಹಿಡಿಯುತ್ತಾರೆ? ಎಂದರು.

ರೇವಣ್ಣ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ನಡೆದ ವಕೀಲರ ವಾದ-ಪ್ರತಿವಾದ ಗಮನಿಸಿದರೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿರುವುದು ಸ್ಪಷ್ಟವಾಗಿದೆ. ರೇವಣ್ಣ ಬಂಧನ ಪ್ರಕರಣದಲ್ಲಿ ಸರ್ಕಾರ ತಪ್ಪು ಮಾಡಿದೆ. ಸದ್ಯದಲ್ಲೇ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಳ್ಳಲಿದೆ ಎಂದರು.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ