ಬೆಳಗಾವಿ, ಮೇ.15: ಬೆಳಗಾವಿ(Belagavi) ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಹುಟ್ಟುವ ಮಲಪ್ರಭಾ ನದಿ(Malaprabha River). ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಯ ಜೀವನದಿಯಾಗಿದೆ. ಈ ಭಾಗದ ರೈತರಿಗೆ ಮತ್ತು ಜನರ ಬದುಕು ಹಸನಾಗಿಸಿದ ನದಿ ಇದು.
ಆದ್ರೆ ಈಮಲಪ್ರಭಾ ನದಿ ಇದೀಗಸಂಪೂರ್ಣವಾಗಿ ಬತ್ತಿ ಹೋಗಿದ್ದು, ನದಿ ಅಕ್ಕಪಕ್ಕದ ಗ್ರಾಮಗಳಿಗೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅದರಲ್ಲೂ ಎಂ.ಕೆ ಹುಬ್ಬಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಬೋರ್ವೆಲ್ಗಳು ಬತ್ತಿ, ಕುಡಿಯಲು ನೀರು ಸಿಗುತ್ತಿಲ್ಲ. ಬೆಳೆಯೂ ಕೂಡ ಒಣಗಿ ಹಾಳಾಗುತ್ತಿವೆ.