Breaking News

ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಸಿದ್ಧತೆ

Spread the love

ಬೆಂಗಳೂರು,ನ.20- ವಿಧಾನಸಭೆಯಲ್ಲಿ ಬಹುಮತದಿಂದ ಅಂಗೀಕೃತವಾದ ಮಸೂದೆಗಳನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗುತ್ತದೆ ಎಂಬ ಕಾರಣಕ್ಕೆ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಸಜ್ಜಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಪರಿಷತ್‍ಗೆ ಹೊಸ ಸಭಾಪತಿ ಆಯ್ಕೆ ಮಾಡಲು ಚಿಂತಿಸಿದೆ ಎಂದು ಮೂಲಗಳು ತಿಳಿಸಿವೆ.

ಉಭಯ ಪಕ್ಷಗಳ ನಡುವೆ ಮೈತ್ರಿಯಾದರೆ, ಬಿಜೆಪಿಗೆ ಸಭಾಪತಿ ಹಾಗೂ ಜೆಡಿಎಸ್‍ಗೆ ಉಪಸಭಾಪತಿ ಸ್ಥಾನ ಹಂಚಿಕೆಯಾಗಲಿದೆ. ಡಿಸೆಂಬರ್ 7 ರಿಂದ 15 ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಮುಂದಾಗಿದ್ದು, ಇದಕ್ಕಾಗಿ ತಯಾರಿ ಕೂಡ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ