ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ಕೆಎಸ್ಆರ್ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯವರನ್ನು (KSRTC) ಒತ್ತಾಯಿಸಿದ್ದಾರೆ.
ಈ ಕುರಿತು ಅವರು ಮೈಸೂರು-ಬೆಂಗಳೂರು-ಎಕ್ಸ್ಪ್ರೆಸ್ ವೇನಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರು ನಮ್ಮ ಕಣ್ಣಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ನಮ್ಮ ಎಲ್ಲ ಸಿಸಿಟಿವಿಗಳು ಅವುಗಳ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿವೆ. ಮೇ 11 ರಂದು ಚನ್ನಪಟ್ಟಣ ಬಳಿ ಕೆಎಸ್ಆರ್ಟಿಸಿ ಚಾಲಕ ಮೊಬೈಲ್ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದಾರೆ ಎಂದು ಫೋಟೊ ಸಮೇತ ಮಾಹಿತಿ ಹಂಚಿಕೊಂಡಿದ್ದಾರೆ.