Breaking News

ನೀತಿ ಸಂಹಿತೆ ಸಡಿಲಿಕೆ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ; 2 ತಿಂಗಳ ಬಳಿಕ ಸಚಿವರು-ಅಧಿಕಾರಿಗಳೊಂದಿಗೆ ಸಭೆ!

Spread the love

ನೀತಿ ಸಂಹಿತೆ ಸಡಿಲಿಕೆ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ; 2 ತಿಂಗಳ ಬಳಿಕ ಸಚಿವರು-ಅಧಿಕಾರಿಗಳೊಂದಿಗೆ ಸಭೆ!

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ್ದು, ಬರ ಪರಿಹಾರ, ಪೂರ್ವ ಮುಂಗಾರು ಮಳೆಯ ಬಿತ್ತನೆ ಚಟುವಟಿಕೆಗಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನೀತಿ ಸಂಹಿತೆ ಸಡಿಲಿಕೆ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ; 2 ತಿಂಗಳ ಬಳಿಕ ಸಚಿವರು-ಅಧಿಕಾರಿಗಳೊಂದಿಗೆ ಸಭೆ!

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದ 10 ದಿನಗಳ ಬಳಿಕ ಚುನಾವಣ ಆಯೋಗವು ನೀತಿ ಸಂಹಿತೆಯ ಕೆಲ ನಿಯಮಗಳನ್ನು ಸಡಿಲಗೊಳಿಸಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಶುಕ್ರವಾರ ಎರಡೂವರೆ ತಾಸು ಸುದೀರ್ಘ ಸಭೆ ನಡೆಸಿದರು.

ಸಭೆಯಲ್ಲಿ ಬೆಳೆ ಹಾನಿ ಪರಿಹಾರ ಹಾಗೂ ಬಿತ್ತನೆ ಚಟುವಟಿಕೆ ಬಗ್ಗೆ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.


Spread the love

About Laxminews 24x7

Check Also

ಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನ

Spread the loveಚಂಡೀಗಢ: ರಜೆ ಮೇಲೆ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ ಯೋಧನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ