ಬೆಂಗಳೂರು: ಇದೇ ತಿಂಗಳು 20ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಒಂದು ವರ್ಷ ಪೂರೈಸಲಿದೆ. ಆದರೆ ಸಂಭ್ರಮಾಚರಣೆ ನಡೆಸುವುದಕ್ಕೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ.
ವಿಧಾನಸಭಾ ಚುನಾವಣೆಗೆ ಮುನ್ನ ಜನತೆಗೆ ನೀಡಿದ್ದ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಹಲವು ಸವಾಲುಗಳ ಮಧ್ಯೆಯೂ ಸಮರ್ಪಕವಾಗಿ ಅನುಷ್ಠಾನ ಗೊಳಿಸಿರುವ ರಾಜ್ಯ ಸರಕಾರವು ಅದರ ನೆರಳಿನಲ್ಲೇ ಲೋಕ ಸಭಾ ಚುನಾವಣೆ ಯನ್ನು ಎದುರಿಸಿದೆ.
ಈ ಸಾಧನೆಯ ಬಲದಿಂದಲೇ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಗಳಿಕೆಯ ವಿಶ್ವಾಸವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿ ದ್ದಾರೆ. ಆದರೆ ಚುನಾವಣೆ ನೀತಿ ಸಂಹಿತೆ ಕಾರಣ ಸಂಭ್ರಮಾಚರಣೆ ನಡೆಸದೆ ಇರಲು ಸರಕಾರ ನಿರ್ಧರಿಸಿದೆ.