ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿ ರಾಜ್ಯ ಸರ್ಕಾರವು ಹು-ಧಾ. ಪೊಲೀಸ್ ಆಯುಕ್ತಾಲಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೋಲಿಸ್ ಆಯುಕ್ತ (ಡಿಸಿಪಿ)ರ ತಲೆದಂಡವಾಗಿದೆ.
ಯುವತಿಯರಿಬ್ಬರ ಕೊಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆಪಾದನೆ ಅಡಿ ಡಿಸಿಪಿ ರಾಜೀವ ಎಂ. ಅವರನ್ನು ರಾಜ್ಯ ಸರ್ಕಾರವು ಅಮಾನತುಗೊಳಿಸಿ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.