Breaking News

ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Spread the love

ಮೇಷ: ಗೃಹಕೃತ್ಯಗಳಿಗೆ ಅನಿವಾರ್ಯವಾಗಿ ಸಮಯ ನೀಡಿಕೆ. ಹತ್ತಿರದ ದೇವಾಲಯಕ್ಕೆ ಭೇಟಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ದಿನ. ದೂರದಲ್ಲಿರುವ ಆತ್ಮೀಯ ಮಿತ್ರರಿಂದ ಶುಭ ಸಮಾಚಾರ.

ವೃಷಭ: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ. ಕುಟುಂಬದ ಹಿರಿಯ ಸದಸ್ಯರ ಭೇಟಿ.

ಅನಾಥಾಶ್ರಮ, ವೃದ್ಧಾಶ್ರಮ ಗಳಿಗೆ ಭೇಟಿ. ಹಿರಿಯರು, ಗೃಹಿಣಿಯರಿಗೆ ನೆಮ್ಮದಿಯ ಅನುಭವ. ಬಂಧುವರ್ಗದಲ್ಲಿ ವಿವಾಹ ಮಾತುಕತೆ.

ಮಿಥುನ: ಮನೆಯಲ್ಲಿ ವಿರಾಮದ ಭಾವ. ಉದ್ಯೋಗಸ್ಥರಿಗೆ ಬಾಕಿಯುಳಿದಿರುವ ನಾಳೆಗೆ ಉಳಿದಿರುವ ಕೆಲಸಗಳ ಚಿಂತೆ. ವ್ಯವಹಾರಸ್ಥರಿಗೆ ನಿರಾಳ ಮನೋಭಾವ. ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ. ಮಕ್ಕಳಿಗೆ ಸಮಾಧಾನದ ವಾತಾವರಣ.

ಕರ್ಕಾಟಕ: ಉದ್ಯೋಗಸ್ಥರಿಗೆ ತಾತ್ಕಾಲಿಕ ನೆಮ್ಮದಿ. ವ್ಯವಹಾರ ಕ್ಷೇತ್ರದ ಮಿತ್ರರೊಂದಿಗೆ ಭೇಟಿ. ಉದ್ಯೋಗಾಸಕ್ತ ಶಿಕ್ಷಿತರಿಗೆ ಅವಕಾಶಗಳು ಗೋಚರ. ಮಕ್ಕಳಿಗೆ ವ್ಯಾಸಂಗದಲ್ಲಿ ಸೂಕ್ತ ಮಾರ್ಗದರ್ಶನದ ಏರ್ಪಾಡು.

ಸಿಂಹ: ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ವ್ಯವಹಾರ ಮತ್ತು ಕಾರ್ಯ ಸುಧಾರಣೆಯ ಚಿಂತೆ. ನೂತನ ಗೃಹ ನಿರ್ಮಾಣ ಪ್ರಗತಿಯಲ್ಲಿ . ವೈದ್ಯರು, ಎಂಜಿನಿಯರರು ಮೊದಲಾದ ವೃತ್ತಿಪರರಿಗೆ ಕೆಲಸದ ಒತ್ತಡ.

ಕನ್ಯಾ: ಎಲ್ಲರ ದೇಹಾರೋಗ್ಯ ಉತ್ತಮ. ಆಯ್ದ ವರ್ಗಗಳ ವ್ಯಾಪಾರಿಗಳಿಗೆ ಉತ್ತಮ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ. ಹೊಸ ರೀತಿಯ ಉದ್ಯಮದ ಕಲ್ಪನೆ ಸಾಕಾರ. ಗೃಹಿಣಿಯರು ಮತ್ತು ಮಕ್ಕಳಿಗೆ ಸಂಭ್ರಮದ ದಿನ.

ತುಲಾ: ದೃಢಸಂಕಲ್ಪದಲ್ಲಿ ಮುಂದುವರಿದರೆ ಜಯ ಖಚಿತ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಬೌದ್ಧಿಕ ಕಾರ್ಯ ಮಾಡುವವರ ಆರೋಗ್ಯದ ಬಗ್ಗೆ ಎಚ್ಚರ. ಮಕ್ಕಳ ಶಾಲಾ ಭವಿಷ್ಯದ ಚಿಂತನೆ.

ವೃಶ್ಚಿಕ: ನೆಮ್ಮದಿಯ ಜೀವನಕ್ಕೆ ಕೊರತೆಯಾಗದು. ಮಹಿಳೆಯರಿಂದ ವಸ್ತ್ರಾಭರಣ ಖರೀದಿ. ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸುಧಾರಣೆ. ಆಸ್ಪತ್ರೆಗೆ ಭೇಟಿಯಿತ್ತು ರೋಗಿ ಗಳಿಗೆ ಸಾಂತ್ವನ. ವ್ಯವಹಾರಾರ್ಥ ಸಣ್ಣ ಪ್ರವಾಸ.

ಧನು: ಗೃಹಸಂಬಂಧಿ ಕಾರ್ಯಗಳಲ್ಲಿ ತಲ್ಲೀನರಾಗುವಿರಿ. ಉದ್ಯಮಿಗಳಿಗೆ ತಾತ್ಕಾಲಿಕ ವಿರಾಮ. ಸಣ್ಣ ಪ್ರವಾಸದ ಸಾಧ್ಯತೆ. ಗೃಹಾಲಂಕಾರದ ಕೆಲಸಗಾರರಿಗೆ ಕೈತುಂಬಾ ಕೆಲಸ ಹಾಗೂ ಸಂಪಾದನೆ. ನೆಂಟರ ಮನೆಗೆ ಭೇಟಿ ನೀಡುವ ಸಾಧ್ಯತೆ.

ಮಕರ: ಸಾವಧಾನದಿಂದ ಮುಂದುವರಿದು ಕಾರ್ಯಸಿದ್ಧಿ. ಪಟ್ಟುಹಿಡಿದು ಕಾರ್ಯ ಸಾಧಿಸಿದ ತೃಪ್ತಿ. ಹಳೆಯ ಒಡನಾಡಿಯಿಂದ ಮತ್ತೂಂದು ಆದಾಯ ಮೂಲದ ಪರಿಚಯ. ಉತ್ತರ ದಿಕ್ಕಿನಲ್ಲಿ ಸಣ್ಣ ಪ್ರಯಾಣದ ಸಾಧ್ಯತೆ.

ಕುಂಭ: ಹೊಸ ಅವಕಾಶಗಳ ಅನ್ವೇಷಣೆ. ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನದ ನೇತೃತ್ವ. ಸಮಾಜದಲ್ಲಿ ಗೌರವ ಪ್ರಾಪ್ತಿ. ಗೃಹಿಣಿಯರಿಗೆ ಸೊÌàದ್ಯೋಗದಲ್ಲಿ ಆಸಕ್ತಿ. ಆಸ್ಪತ್ರೆ, ಅನಾಥಾಲಯ, ವೃದ್ಧಾಶ್ರಮಕ್ಕೆ ಭೇಟಿ.

ಮೀನ: ಕರ್ಮಕಾರಕನಾದ ಶನಿಯಿಂದ ಸತ್ಕರ್ಮಗಳಿಗೆ ಪ್ರೇರಣೆ. ಗಳಿಕೆಯ ಮಾರ್ಗಗಳು ಸುಲಭದಲ್ಲಿ ಗೋಚರ. ಇಷ್ಟದೇವತಾರ್ಚನೆಯಿಂದ ಸಮಸ್ಯೆಗಳು ದೂರ. ಹಿರಿಯರ ಆರೋಗ್ಯ ಉತ್ತಮ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ. ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮ.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ