Breaking News

ಬಿತ್ತನೆ ಬೀಜ ಖರೀದಿಗೆ ರೈತರಿಗೆ ಸಲಹೆಗಳು

Spread the love

ಬೆಂಗಳೂರು, ಮೇ 19: ಕರ್ನಾಟಕದ ವಿವಿಧ ಜಿಲ್ಲೆಯಲ್ಲಿ ಪೂರ್ವ ಮುಂಗಾರು, ಚಂಡಮಾರುತದ ಪ್ರಭಾವದಿಂದ ಮಳೆಯಾಗುತ್ತಿದೆ. ನೈಋತ್ಯ ಮುಂಗಾರು ಹಂಗಾಮು 2024 ಸಹ ಆರಂಭವಾಗಲು ಕೆಲವೇ ದಿನ ಉಳಿದಿದ್ದು, ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ.

ಕಳೆದ ವರ್ಷದ ಮಳೆ ಕೊರತೆ, ಬೆಳೆ ನಷ್ಟ, ಬೇಸಿಗೆಯಿಂದ ಕಂಗಾಲಾಗಿದ್ದ ರೈತರಿಗೆ ಪೂರ್ವ ಮುಂಗಾರು ಮಳೆ ಕೊಂಚ ನೆಮ್ಮದಿ ತಂದಿದೆ.ಮುಂಗಾರು ಮಳೆ ಆರಂಭ: ಬಿತ್ತನೆ ಬೀಜ ಖರೀದಿಗೆ ರೈತರಿಗೆ ಸಲಹೆಗಳು

ನೈಋತ್ಯ ಮುಂಗಾರು ಮಳೆ ಸಹ ಉತ್ತಮವಾಗಿ ಸುರಿಯಲಿದೆ ಎಂಬ ನಿರೀಕ್ಷೆಯಲ್ಲಿ ರೈತರು ಕೃಷಿ ಚಟುವಟಿಕೆಗೆ ಚಾಲನೆ ನೀಡಿದ್ದಾರೆ.ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಕೃಷಿ ಇಲಾಖೆ ರೈತರಿಗೆ ಹಲವಾರು ಸಲಹೆಗಳನ್ನು ನೀಡಿದೆ. ಅವುಗಳಲ್ಲಿ ಪ್ರಮುಖವಾಗಿ ಬಿತ್ತನೆ ಬೀಜ ಖರೀದಿ ಕುರಿತು ಮಾಹಿತಿ ನೀಡಲಾಗಿದೆ. ರೈತರು ಬೀಜ ಖರೀದಿ ಮಾಡುವಾಗ ಎಚ್ಚರ ವಹಿಸಬೇಕು ಎಂದು ಕರೆ ನೀಡಲಾಗಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ