Breaking News

ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ

Spread the love

ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ ಕಾರ್ಯಕ್ರಮ ಭಾನುವಾರ ಸಂಪನ್ನಗೊಂಡಿತು.

ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ

ಜಾತ್ರೆಯ ಕೊನೆಯ ದಿನ ಬೆಳಿಗ್ಗೆ ಮಹಾಕುಂಭಾಭಿಷೇಕ, ದೀಪಾರಾಧನೆ, ಮಹಾಮಂಗಳಾರತಿ ಧಾರ್ಮಿಕ ಕಾರ್ಯಕ್ರಮ ನೆರವೇರಿದವು.

ಸಾವಿರಾರು ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಜಿಲ್ಲೆಯ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಸರದಿ ಸಾಲಿನಲ್ಲಿ ನಿಂತು, ಬನಶಂಕರಿ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು. ತಮ್ಮ ಇಷ್ಟಾರ್ಥ ಈಡೇರಿದ್ದರಿಂದ ಕೆಲವರು ದೇವಿಗೆ ಸೀರೆ, ಚಿನ್ನಾಭರಣ ಮತ್ತಿತರ ಕಾಣಿಕೆಗಳನ್ನು ಅರ್ಪಿಸಿ ಭಕ್ತಿ ಮೆರೆದರು. ಸರ್ವಧರ್ಮೀಯರು ಜಾತ್ರೆಯಲ್ಲಿ ಭಾಗವಹಿಸಿದ್ದು ಭಾವೈಕ್ಯತೆಗೆ ಸಾಕ್ಷಿಯಾಗಿತ್ತು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ