Breaking News

ಚನ್ನಮ್ಮನ ಕಿತ್ತೂರು: ಬರಿದಾದ ಕಲಭಾಂವಿ ಹೊಸಕೆರೆಯ ಒಡಲು

Spread the love

ನ್ನಮ್ಮನ ಕಿತ್ತೂರು: ಕೆಲವು ವರ್ಷಗಳ ಹಿಂದೆ ತನ್ನೊಡಲು ತುಂಬಿಕೊಂಡು ಊರ ಪ್ರವೇಶ ದ್ವಾರದಲ್ಲೇ ಕೈಬೀಸಿ ಆಮಂತ್ರಣ ನೀಡುತ್ತ ನಿಂತಿದೆಯೆನೋ ಎಂಬಂತಿದ್ದ ತಾಲ್ಲೂಕಿನ ಕಲಭಾಂವಿ ಗ್ರಾಮದ ‘ಹೊಸಕೆರೆ’ ಈ ಬಾರಿ ಮಳೆರಾಯನ ಅವಕೃಪೆಯಿಂದ ಅಲ್ಲಲ್ಲಿ ಪಾದ ಮುಳುಗುವ ನೀರನ್ನು ಬಿಟ್ಟರೆ ಭಣಗುಟ್ಟುತ್ತ ನಿಂತಿದೆ.

 

‘ನರೇಗಾ ಯೋಜನೆಯಡಿ ಮಾಡಿದ ಕಾಮಗಾರಿಯ ಗುಂಡಿಗಳಿರುವ ಪ್ರದೇಶದಲ್ಲಿ ಮೊನ್ನೆ ಸುರಿದ ಅಲ್ಪಮಳೆಯಿಂದ ನೀರು ತುಂಬಿದೆ. ನೀವು ಹೋದವಾರ ಇಲ್ಲಿಗೆ ಬಂದಿದ್ದರೆ ಕೆರೆ ಭಣಭಣ ಎನ್ನುತ್ತಿತ್ತು’ ಎಂದು ಕೆರೆ ಬಳಿಯ ಕಟ್ಟೆಯ ಮೇಲೆ ಕುಳಿತಿದ್ದ ಗ್ರಾಮಸ್ಥರು ಹೇಳಿದರು.

4 ವರ್ಷಗಳಿಂದ ತುಂಬಿಲ್ಲ: ‘ಶತಮಾನದ ಹಳೆಯದಾದ ಈ ಕೆರೆ ತುಂಬಿದ್ದನ್ನು ನೋಡಿ ನಾಲ್ಕು ವರ್ಷಗಳು ಕಳೆದಿವೆ. ನಂತರದ ವರ್ಷಗಳಲ್ಲಿ ತುಂಬಿಲ್ಲ. ಕೆರೆ ಭರ್ತಿಯಾದರೆ ಊರ ಜನರಿಗೆ ಹೆಚ್ಚು ಅನುಕೂಲವಿದೆ’ ಎನ್ನುತ್ತಾರೆ ಗ್ರಾಮಸ್ಥರಾದ ಬಸಪ್ಪ ಗೂಗಿ ಮತ್ತು ಭೀಮಪ್ಪ ಬಡಿಗೇರ.

‘ಕೆರೆ ತುಂಬಿದಾಗ ಮಹಿಳೆಯರು ಬಟ್ಟೆ ತೊಳೆಯುತ್ತಿದ್ದರು. ದನಗಳಿಗೆ ಕುಡಿಯಲು ಇದೇ ನೀರು ಬಳಸಲಾಗುತ್ತಿತ್ತು. ದಶಕಗಳ ಹಿಂದಕ್ಕೆ ಹೋದರೆ, ಈ ಕೆರೆಯ ನೀರನ್ನು ಕುಡಿಯಲು ಮತ್ತು ಅಡುಗೆ ಮಾಡಲು ಜನರು ಬಳಸುತ್ತಿದ್ದರು’ ಎಂದು ಈ ಕೆರೆಯ ಉಪಯೋಗದ ಬಗ್ಗೆ ನೆನಪುಗಳನ್ನು ಬಸಪ್ಪ ಜೀವೊಜಿ ಹಂಚಿಕೊಂಡರು.ಚನ್ನಮ್ಮನ ಕಿತ್ತೂರು: ಬರಿದಾದ ಕಲಭಾಂವಿ ಹೊಸಕೆರೆಯ ಒಡಲು

ಸಾಮರ್ಥ್ಯ ಹೆಚ್ಚಿಸಬೇಕಿದೆ: ಈ ಕೆರೆಯ ಹೂಳೆತ್ತಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸಿದರೆ, ಪಕ್ಕದ ಜಮೀನುಗಳಲ್ಲಿನ ಕೊಳವೆಬಾವಿಗಳ ಅಂತರ್ಜಲದ ಮೇಲ್ಮಟ್ಟ ಕಾಯ್ದುಕೊಳ್ಳಲು ಸಹಕಾರಿ ಆಗುತ್ತದೆ. ಹಿರಿಯರ ಕೆರೆಯ ನಿರ್ಮಾಣದ ಕಲ್ಪನೆಯೇ ಹಾಗಿತ್ತು’ ಎಂದು ಗ್ರಾಮದ ಮುಖಂಡ ಬಾಬಾಜಾನ ಬೆಳವಡಿ ತಿಳಿಸಿದರು.

‘ಹತ್ತಿರವೇ ಮಲಪ್ರಭಾ ನದಿ ಹರಿದಿದೆ. ನದಿಯಿಂದ ಕೆರೆ ತುಂಬಿಸುವ ಯೋಜನೆಯಿಂದ ಈ ಕೆರೆ ವಂಚಿತವಾಗಿದೆ. ಈ ಯೋಜನೆ ಜಾರಿಯಾದರೆ ಎಲ್ಲರಿಗೂ ಅನುಕೂಲವಾಗುತ್ತದೆ’ ಎಂದರು.


Spread the love

About Laxminews 24x7

Check Also

ರಾಯಬಾಗ: ರೇಬಿಸ್ ಲಸಿಕಾ ಅಭಿಯಾನಕ್ಕೆ ಚಾಲನೆ

Spread the love ರಾಯಬಾಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಬೆಕ್ಕೇರಿ ಇವರ ಸಹಯೋಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ