Breaking News

ಲಾಕ್‍ಡೌನ್ ಸಮಯದಲ್ಲಿ ಎಣ್ಣೆ ಕಳ್ಳತನ ಮಾಡಿದ್ದ ಇಬ್ಬರು ಖತರ್ನಾಕ್ ಮದ್ಯ ಕಳ್ಳರ….

Spread the love

ಹಾಸನ: ಲಾಕ್‍ಡೌನ್ ಸಮಯದಲ್ಲಿ ಎಣ್ಣೆ ಕಳ್ಳತನ ಮಾಡಿ ಮತ್ತೆ ಲಾಕ್‍ಡೌನ್ ಆದರೆ ಹೆಚ್ಚು ಬೆಲೆಗೆ ಮಾರಬಹುದು ಎಂದು ಪ್ಲಾನ್ ಮಾಡಿದ್ದ ಇಬ್ಬರು ಖತರ್ನಾಕ್ ಮದ್ಯ ಕಳ್ಳರನ್ನು ಜಿಲ್ಲೆಯ ಸಕಲೇಶಪುರ ತಾಲೂಕಿನ ಪೊಲೀಸರು ಬಂಧಿಸಿದ್ದಾರೆ.

ಮೋಹನ್ (31) ಮತ್ತು ಚಂದ್ರು (42) ಬಂಧಿತ ಆರೋಪಿಗಳು. ಇತ್ತೀಚಿನ ದಿನಗಳಲ್ಲಿ ಸಕಲೇಶಪುರ ತಾಲೂಕು ಸೇರಿದಂತೆ ಹಾಸನ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವ್ಯಾಪಕವಾಗಿ ಮದ್ಯದ ಕಳ್ಳತನ ನಡೆಯುತ್ತಿತ್ತು. ಹೀಗಾಗಿ ಸಕಲೇಶಪುರ ಪೊಲೀಸ್ ಸಿಬ್ಬಂದಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು.

ಪೊಲೀಸರ ತನಿಖೆಯಲ್ಲಿ ಇಬ್ಬರು ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಬಂಧಿತರಿಂದ ವಿವಿಧ ಕಂಪನಿಗಳ ಆರು ಲಕ್ಷದ ಅರವತ್ತು ಸಾವಿರ ಮೌಲ್ಯದ ಮದ್ಯ, ಒಂದು ಕಾರು, ಒಂದು ಕಬ್ಬಿಣದ ರಾಡ್ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಲಾಕ್‍ಡೌನ್ ಸಮಯದಲ್ಲಿ ಮದ್ಯ ಕದ್ದು ನಂತರದ ದಿನಗಳಲ್ಲಿ ಹೆಚ್ಚಿನ ಬೆಲೆಗೆ ಮಾರುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ