Breaking News

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದಿಗೆ SIT ಮನವಿ!

Spread the love

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದಿಗೆ SIT ಮನವಿ!

ಬೆಂಗಳೂರು: ಹಾಸನದ ಹಾಲಿ ಸಂಸದ, ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿದ್ದಂತೆ ಈ ರೀತಿ ವಿದೇಶಕ್ಕೆ ಹಾರುವ ಮೂಲಕ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಸಹ ಕೇಳಿಬಂದಿದೆ.

ಈಗಾಗಲೇ ಚುರುಕು ತನಿಖೆಯನ್ನು ಕೈಗೊಂಡಿರುವ ಎಸ್​ಐಟಿ ತಂಡ, ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದೆ.ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದಿಗೆ SIT ಮನವಿ!

ಈ ಪ್ರಕರಣ ಬೆಳಕಿಗೆ ಬಂದು ಇಂದಿಗೆ ಒಂದು ತಿಂಗಳು ಸಮೀಪಿಸುತ್ತಿದ್ದರೂ ಪ್ರಜ್ವಲ್ ರೇವಣ್ಣ ಮಾತ್ರ ಇನ್ನೂ ವಿದೇಶದಿಂದ ಬೆಂಗಳೂರಿಗೆ ವಾಪಾಸ್ ಆಗಿಲ್ಲ. ಸದ್ಯ ಇದು ಎಸ್​ಐಟಿಗೆ ದೊಡ್ಡ ತಲೆನೋವಾಗಿದ್ದು, ಬಂಧನದ ವಾರೆಂಟ್ ಉಲ್ಲೇಖ ಮಾಡಿ, ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ರವಾನಿಸಿದೆ. ಈ ಕೂಡಲೇ ಪ್ರಜ್ವಲ್​ಗೆ ಸಂಬಂಧಿಸಿದ ಪಾಸ್‌ಪೋರ್ಟ್‌ ಅನ್ನು ರದ್ದುಗೊಳಿಸಬೇಕು ಎಂದು ಪತ್ರದ ಮುಖೇನ ಮನವಿ ಮಾಡಿರುವುದು ತಿಳಿದುಬಂದಿದೆ.

ಇನ್ನು ನಿನ್ನೆ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ‘ಪ್ರಜ್ವಲ್ ನಿಮಗೆ ಎಚ್​.ಡಿ. ದೇವೇಗೌಡರು ಮತ್ತು ನಮ್ಮ ಮೇಲೆ ಗೌರವವಿದ್ದರೇ ದಯವಿಟ್ಟು ರಾಜ್ಯಕ್ಕೆ ಹಿಂತಿರುಗಿ. ನೀವು ಎಲ್ಲಿದ್ದರೂ 24-48 ಗಂಟೆಯೊಳಗೆ ಆಗಮಿಸಿ, ಎಸ್‌ಐಟಿ ತಂಡದ ಮುಂದೆ ಶರಣಾಗಿ ತನಿಖೆಗೆ ಸಹಕಾರ ನೀಡಿ’ ಎಂದು ಮನವಿ ಮಾಡಿದರು,


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ