ಬೆಂಗಳೂರು: ರಾಜ್ಯದಲ್ಲಿ 1,781 ಮಂದಿಗೆ ಸೋಂಕು ತಗುಲಿದ್ದು, 2,181 ಜನ ಆಸ್ಪ್ರತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 17 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ. ಈ ಪೈಕಿ 8,33,169 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 24,752 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,621 ಮಂದಿ ಸೋಂಕಿಗೆ ಮೃತಪಟ್ಟಿದ್ದು, 539 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.