ಪುಣೆ : ಜಿಲ್ಲೆಯ ಉಜನಿ ಅಣೆಕಟ್ಟಿನ ಹಿನ್ನೀರಿನಲ್ಲಿ ದೋಣಿ ಮಗುಚಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ಸಂಜೆ ಭಾರೀ ಗಾಳಿ ಮತ್ತು ಮಳೆಯ ಹಿನ್ನೆಲೆಯಲ್ಲಿ ಈ ದುರಂತ ನಡೆದಿದೆ.
ಸಂಜೆ ನಗರದಾದ್ಯಂತ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸಿದ ನಂತರ ಈ ಘಟನೆ ಸಂಭವಿಸಿದೆ . ಇಂದಾಪುರ ತಹಶೀಲ್ದಾರ್ ಶ್ರೀಕಾಂತ್ ಪಾಟೀಲ್ ಅವರು ನೀಡಿದ ಪ್ರಕಾರ, ಮೃತರಲ್ಲಿ ಮೂವರು ಪುರುಷರು, ಒಬ್ಬ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ.
ಬೋಟ್ ಸೇವೆಯು ಕಲಾಶಿ ಮತ್ತು ಭುಗಾವ್ ಗ್ರಾಮಗಳ ನಡುವೆ ಕಾರ್ಯನಿರ್ವಹಿಸುತ್ತಿತ್ತು. .ಏಳು ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಪಲ್ಟಿಯಾಗಿದೆ. ಬೋಟ್ನಲ್ಲಿದ್ದ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಶ್ರೇಣಿಯ ಅಧಿಕಾರಿಯೊಬ್ಬರು ಈಜಿ ಸುರಕ್ಷಿತ ಸ್ಥಳಕ್ಕೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಎನ್ಡಿಆರ್ಎಫ್ ಮತ್ತು ಸ್ಥಳೀಯ ಆಡಳಿತದ ಸಹಾಯದಿಂದ ನೀರು ಪಾಲಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾತ್ತಿದೆ.