Breaking News

ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ: ಎರಡು ಗುಂಪುಗಳ ಮಧ್ಯೆ ಗಲಾಟೆ, ಕಲ್ಲು, ತಲ್ವಾರ್ ತೂರಾಟ

Spread the love

ಬೆಳಗಾವಿ: ಕ್ರಿಕೆಟ್ ವಿಚಾರಕ್ಕೆ ಉಂಟಾದಂತ ಜಗಳ, ತಾರಕಕ್ಕೆ ಏರಿದ ಪರಿಣಾಮ, ಬೆಳಗಾವಿಯಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ, ತಲ್ವಾರ್ ಗಳನ್ನು ಎಸೆದು ಬೆಚ್ಚಿ ಬೀಳಿಸುವಂತೆ ಮಾಡಿರುವ ಘಟನೆ ನಡೆದಿದೆ. ಮನೆಯ ಮುಂದಿನ ವಾಹನಗಳು ಕಿಡಿಗೇಡಿಗಳ ದಾಳಿಯಲ್ಲಿ ಜಖಂ ಗೊಂಡಿದ್ದಾರೆ.

 

ಬೆಳಗಾವಿ ಆಳ್ವಾಸ್ ಓಣಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಈ ಗಲಾಟೆ ತಾರಕ್ಕೇರಿದ ಪರಿಣಾಮ, ಮನೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನೆಡಸಿದ್ದಾರೆ. ಅಲ್ಲದೇ ವಾಹನಗಳಲ್ಲು ಜಖಂ ಗೊಳಿಸಿದ್ದಾರೆ. ಈ ಎಲ್ಲಾ ಕಿಡಿಗೇಡಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಳಗಾವಿಯ ಆಳ್ವಾಸ್ ಗಲ್ಲಿಯಲ್ಲಿನ ಈ ಘಟನೆಯಿಂದ ಬೆಳಗಾವಿ ನಗರದಾಧ್ಯಂತ ಹೈ ಅಲರ್ಟ್ ಅನ್ನು ಪೊಲೀಸರು ಘೋಷಿಸಿದ್ದಾರೆ. ಅಲ್ಲದೇ ಕಿಡಿಗೇಡಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸದ್ಯ ಬೆಳಗಾವಿಯ ಆಳ್ವಾಸ್ ಗಲ್ಲಿಯಲ್ಲಿ ಬಿಗುವಿನ ವಾತಾವರಣವಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ