ಚಿಕ್ಕೋಡಿ, ಮೇ 24: ಅಲೆಮಾರಿ ಜನಾಂಗಕ್ಕೆ ಬಜೆಟ್ನಲ್ಲಿ ಒಂದು ರೂಪಾಯಿ ಹಣ ನೀಡಿಲ್ಲ.
ಅದನ್ನ ಬಿಟ್ಟು ಅಂಜನಾದ್ರಿ ಹನುಮ ಜನ್ಮ ಭೂಮಿಗೆ 100 ಕೋಟಿ ರೂ. ಕೊಟ್ಟಿದ್ದೆ ಸರ್ಕಾರದ ಆದ್ಯತೆನಾ ಎಂದು ನಟ ಚೇತನ (Chethan) ಪ್ರಶ್ನೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಅಂಜನಾದ್ರಿ (Anjeyanadri Hill) ಹನುಮ ಮಂದಿರ ಅಭಿವೃದ್ದಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಹಣ ನೀಡಿಕೆ ವಿಚಾರವಾಗಿ ಮಾತನಾಡಿದ ಅವರು, ಅದೇ ಹಣವನ್ನು ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ಬಳಕೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.
82 ಕುಟುಂಬಗಳು ಇನ್ನೂ ಕೂಡ ಬಡತನದಲ್ಲಿವೆ. ಗುಡಿಸಲಿನಲ್ಲಿ ಬದುಕು ಸಾಗಿಸುತ್ತಿದ್ದಾರೆ. ಚಿಕ್ಕೋಡಿ ಪಟ್ಟಣದ ರಾಮನಗರ ಅಲೆಮಾರಿ ಜನಾಂಗದವರಿಗೆ ಸೂರು ನೀಡುವಂತೆ ಒತ್ತಾಯಿಸಿದ್ದಾರೆ. ಜಾತಿ ಜನಗಣತಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಇನ್ನು ಸಿದ್ದರಾಮಯ್ಯ ಪರ ಕಿಡಿಕಾರಿರುವ ನಟ ಚೇತನ, ಸಿದ್ದರಾಮಯ್ಯ ಅಹಿಂದ ಪರ ಕೆಲಸ ಮಾಡುತ್ತಿಲ್ಲ ಅವರು ಸೋಮಾರಿ ಸಿದ್ದರಾಮಯ್ಯ ಎಂದು ಲೇವಡಿ ಮಾಡಿದ್ದಾರೆ. ಶ್ರೀಮಂತರ ಆಸ್ತಿ ಬಡವರಿಗೆ ಮರು ಹಂಚಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.
Laxmi News 24×7