Breaking News

ಸಿದ್ದರಾಮಯ್ಯ ಪರ ಕಿಡಿಕಾರಿರುವ ನಟ ಚೇತನ,

Spread the love

ಚಿಕ್ಕೋಡಿ, ಮೇ 24: ಅಲೆಮಾರಿ ಜನಾಂಗಕ್ಕೆ ಬಜೆಟ್​​ನಲ್ಲಿ ಒಂದು ರೂಪಾಯಿ ಹಣ ನೀಡಿಲ್ಲ.

ಅದನ್ನ ಬಿಟ್ಟು ಅಂಜನಾದ್ರಿ ಹನುಮ ಜನ್ಮ ಭೂಮಿಗೆ 100 ಕೋಟಿ ರೂ. ಕೊಟ್ಟಿದ್ದೆ ಸರ್ಕಾರದ ಆದ್ಯತೆನಾ ಎಂದು ನಟ ಚೇತನ (Chethan) ಪ್ರಶ್ನೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಅಂಜನಾದ್ರಿ (Anjeyanadri Hill) ಹನುಮ ಮಂದಿರ ಅಭಿವೃದ್ದಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಹಣ ನೀಡಿಕೆ ವಿಚಾರವಾಗಿ ಮಾತನಾಡಿದ ಅವರು, ಅದೇ ಹಣವನ್ನು ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ಬಳಕೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.

82 ಕುಟುಂಬಗಳು ಇನ್ನೂ ಕೂಡ ಬಡತನದಲ್ಲಿವೆ. ಗುಡಿಸಲಿನಲ್ಲಿ ಬದುಕು ಸಾಗಿಸುತ್ತಿದ್ದಾರೆ. ಚಿಕ್ಕೋಡಿ ಪಟ್ಟಣದ ರಾಮನಗರ ಅಲೆಮಾರಿ ಜನಾಂಗದವರಿಗೆ ಸೂರು ನೀಡುವಂತೆ ಒತ್ತಾಯಿಸಿದ್ದಾರೆ. ಜಾತಿ ಜನಗಣತಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಇನ್ನು ಸಿದ್ದರಾಮಯ್ಯ ಪರ ಕಿಡಿಕಾರಿರುವ ನಟ ಚೇತನ, ಸಿದ್ದರಾಮಯ್ಯ ಅಹಿಂದ ಪರ ಕೆಲಸ ಮಾಡುತ್ತಿಲ್ಲ ಅವರು ಸೋಮಾರಿ ಸಿದ್ದರಾಮಯ್ಯ ಎಂದು ಲೇವಡಿ ಮಾಡಿದ್ದಾರೆ. ಶ್ರೀಮಂತರ ಆಸ್ತಿ ಬಡವರಿಗೆ ಮರು ಹಂಚಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಮಕ್ಕಳ ಶಿಕ್ಷಣಕ್ಕೆ ಯಾವುದೇ ಮೂಲಸೌಲಭ್ಯ ಕೊರತೆಯಾಗದಂತೆ ಕ್ರಮ : ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ 3 ಶಾಲೆಗಳ 6 ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

Spread the love ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇವೆ ಅಭಿವೃದ್ಧಿಗೆ ಹೆಚ್ಚಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ