ಬೆಳಗಾವಿ: ಇಲ್ಲಿನ ಟಿಳಕ ಚೌಕ್ನಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಶುಕ್ರವಾರ ವಿದ್ಯುತ್ ಪರಿವರ್ತಕ ಒಳಗೊಂಡ ಕಂಬ ಏರಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇದನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಂಚಾರ ಸಮಸ್ಯೆ ತಲೆದೋರಿತು.
ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಹೆಸ್ಕಾಂ ಸಿಬ್ಬಂದಿ ಮತ್ತು ಪೊಲೀಸರು, ಆತನನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾದರು.