Breaking News

ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ? ಸಿಎಂ

Spread the love

ಮಂಗಳೂರು: ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ‌ ಆಗಲಿದೆ ಎಂದರು.

ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ.

ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ? ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಹರೀಶ್ ಪೂಂಜ ಅವರ ಮೇಲೆ ದಾಖಲಾಗಿದೆ.

ಒಂದರಲ್ಲಿ ಸ್ಟೇಷನ್ ಬೇಲ್ ಸಿಕ್ಕಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ? ಕಾನೂನು ಹಾಗೆ ಹೇಳುತ್ತದೆಯಾ? ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ