Breaking News

ಉಡುಪಿ ನಡುರಸ್ತೆಯಲ್ಲೇ ಗ್ಯಾಂಗ್ ವಾರ್ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Spread the love

ಉಡುಪಿ: ಉಡುಪಿ-ಮಣಿಪಾಲ ರಸ್ತೆಯ ನಡುರಸ್ತೆಯಲ್ಲೇ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಮೇ 18ರಂದು ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಇದರ ಆಧಾರದ ಮೇಲೆ ಪೊಲೀಸರು ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದರು.ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂದು ಗುರ್ತಿಸಲಾಗಿದೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ