ಕ್ರಮ ಕೈಗೊಳ್ಳದಿದ್ದರೆ ಡ್ರಗ್ಸ್ ಮಾಫಿಯಾದಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ: ಪ್ರಲ್ಹಾದ್ ಜೋಶಿ
ಬೆಂಗಳೂರು: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾದಕ ದ್ರವ್ಯ ದಂಧೆ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳದಿದ್ದರೆ, ರಾಜ್ಯವು ಡ್ರಗ್ಸ್ ಹಾವಳಿಯಲ್ಲಿ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಬೆಂಗಳೂರು, ಮಂಗಳೂರು ಭಾಗದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿದ್ದು, ಈ ನಿಟ್ಟಿನಲ್ಲಿ ಸಾಕಷ್ಟು ಪುರಾವೆಗಳನ್ನು ಒದಗಿಸುತ್ತಿದೆ ಎಂದರು.
ಡ್ರಗ್ಸ್ ದಂಧೆ ಪ್ರಕರಣಗಳನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ತೋರುತ್ತಿದೆ. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತಲೆ ಎತ್ತುತ್ತಿದೆ. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಅವಕಾಶ ನೀಡಬಾರದು. ಯುವಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
ಈಮಧ್ಯೆ, ಪ್ರತಿಪಕ್ಷ ನಾಯಕ ಆರ್ ಅಶೋಕ ಮಾತನಾಡಿ, ಶಾಂತಿ, ಕಾನೂನು ಸುವ್ಯವಸ್ಥೆಗೆ ಹೆಸರಾದ ಕರ್ನಾಟಕ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ ಎಂದರು.