ನಟ ಸಲ್ಮಾನ್ ಖಾನ್ (Salman Khan) ಅವರು ಮುಂದಿನ ಸಿನಿಮಾದ ತಯಾರಿಯಲ್ಲಿ ಬ್ಯುಸಿ ಆಗಿದ್ದಾರೆ. ಈ ಬಾರಿ ಅವರು ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಎ.ಆರ್. ಮುರುಗದಾಸ್ ಜೊತೆ ಕೈ ಜೋಡಿಸಿದ್ದಾರೆ.
ಈ ಸಿನಿಮಾಗೆ ‘ಸಿಕಂದರ್’ (Sikandar) ಎಂದು ಶೀರ್ಷಿಕೆ ಇಡಲಾಗಿದೆ. ಸಲ್ಮಾನ್ ಖಾನ್ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿರುವ ಈ ಸಿನಿಮಾದ ಬಗ್ಗೆ ಒಂದು ಎಗ್ಸೈಟಿಂಗ್ ನ್ಯೂಸ್ ಕೇಳಿಬಂದಿದೆ. ‘ಸಿಕಂದರ್’ ಸಿನಿಮಾದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್ (Sathyaraj) ಅವರು ವಿಲನ್ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅನೇಕ ಪೋಸ್ಟ್ಗಳು ಹರಿದಾಡುತ್ತಿವೆ.ಬಾಹುಬಲಿ’ ಸಿನಿಮಾದಲ್ಲಿ ಸತ್ಯರಾಜ್ ಅವರು ಕಟ್ಟಪ್ಪ ಎಂಬ ಪಾತ್ರ ಮಾಡಿ ಸಖತ್ ಫೇಮಸ್ ಆದರು. ದಕ್ಷಿಣ ಭಾರತ ಮಾತ್ರವಲ್ಲದೇ ಉತ್ತರ ಭಾರತದಲ್ಲೂ ಅವರಿಗೆ ತುಂಬ ಜನಪ್ರಿಯತೆ ಸಿಕ್ಕಿತು. ಈಗ ಅವರು ಸಲ್ಮಾನ್ ಖಾನ್ ಎದುರು ವಿಲನ್ ಆಗಿ ಅಬ್ಬರಿಸಿದರೆ ಅವರ ಚಾರ್ಮ್ ಇನ್ನಷ್ಟು ಹೆಚ್ಚಾಗಲಿದೆ. ಆದರೆ ಈ ವಿಷಯವನ್ನು ಚಿತ್ರತಂಡದವರು ಅಧಿಕೃತವಾಗಿ ಹೇಳುವುದು ಬಾಕಿ ಇದೆ. ಅದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.