ಬೆಳಗಾವಿ: ಇಲ್ಲಿನ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ತರಬೇತಿ ನೀಡಲಾಯಿತು.
ನಗರ ಪೊಲೀಸ್ ಉಪ ಆಯುಕ್ತರ ನೇತೃತ್ವದಲ್ಲಿ ನಡೆದ ತರಬೇತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಸ ಸಂಹಿತೆ, ಭಾರತೀಯ ಸಾಕ್ಷಿ ಅಧಿನಿಯಮ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಿದರು.
‘ಜುಲೈ 1ರಿಂದ ಹೊಸ ಕಾನೂನುಗಳು ಜಾರಿಗೆ ಬರಲಿವೆ. ಈ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವುದಕ್ಕಾಗಿ ತರಬೇತಿ ನೀಡಲಾಗುತ್ತಿದೆ. ಈವರೆಗೆ 800 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಈಗಾಗಲೇ ಎರಡು ಹಂತದ ತರಬೇತಿ ಮುಗಿದಿದೆ. ಜೂನ್ 10ರವರೆಗೆ ತರಬೇತಿ ನಡೆಯಲಿವೆ’ ಎಂದು ನಗರ ಪೊಲೀಸ್ ಉಪ ಆಯುಕ್ತೆ ಪಿ.ವಿ.ಸ್ನೇಹಾ ತಿಳಿಸಿದ್ದಾರೆ.