Breaking News

ಠಾಣೆಯಲ್ಲೇ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಹೆಡ್ ಕಾನ್ಸ್‌ಟೇಬಲ್ ಅಮಾನತು

Spread the love

ಬೆಳಗಾವಿ, ಮೇ.28: ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆ(Ankali police station)ಯಲ್ಲಿ ತಡರಾತ್ರಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಕೇಳಿಬಂದಿತ್ತು.ಜೊತೆಗೆಠಾಣೆ ಮುಂಭಾಗದಲ್ಲಿಮದ್ಯದ ಖಾಲಿ ಬಾಟಲ್, ವಾಟರ್ ಬಾಟಲ್ ಟೇಬಲ್ ಮೇಲೆ ಇರುವ ಫೋಟೋಗಳು ವೈರಲ್ ಆಗಿತ್ತು.

ಪೊಲೀಸರ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿತ್ತು. ಈ ಹಿನ್ನಲೆ ಅಂಕಲಿ ಠಾಣೆ ಹೆಡ್ ಕಾನ್ಸ್‌ಟೇಬಲ್ ರಾಮಚಂದ್ರ ಖೋತ ಎಂಬುವವರನ್ನು ಅಮಾನತುಗೊಳಿಸಿ ಎಸ್​ಪಿ ಭೀಮಾಶಂಕರ ಗುಳೇದ್ ಆದೇಶಿಸಿದ್ದಾರೆ.ಪೊಲೀಸ್​ ಠಾಣೆಯಲ್ಲೇ ಎಣ್ಣೆ ಪಾರ್ಟಿ; ಹೆಡ್ ಕಾನ್ಸ್‌ಟೇಬಲ್ ಅಮಾನತು

ಸರಕಾರಿ ವಸತಿ ಗೃಹದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಅಧಿಕಾರಿಗಳು

ಇದೇ ಮೇ.22 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸರಕಾರಿ ವಸತಿ ಗೃಹದಲ್ಲಿ ಜಿಲ್ಲಾ ಪಂಚಾಯತಿ ವಿಭಾಗದ ಜಮಖಂಡಿ ಎಇಇ ಎಮ್​ಎಸ್​ ನಾಯಕ,

ಇಂಜಿನಿಯರ್​ಗಳಾದ ರಾಮಪ್ಪ ರಾಠೋಡ್, ಜಗದೀಶ್ ನಾಡಗೌಡ, ಗಜಾನನ ಪಾಟೀಲ್, ಶ್ರೀಶೈಲ್ ಹೂಗಾರ ಹಾಗೂ ಗುತ್ತಿಗೆದಾರರಾದ ಸಾಗರ, ಶೀತಲ ಹರಿಜನ ಸೇರಿದಂತೆ ಆರು ಜನ ಗುತ್ತಿಗೆದಾರರು ಸೇರಿಕೊಂಡು ಮದ್ಯಸೇವನೆ ಮಾಡಿದ್ದರು.


Spread the love

About Laxminews 24x7

Check Also

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Spread the loveಬೆಂಗಳೂರು:  ಸುರಿದ ಭಾರೀ ಮಳೆಗೆ ನಡೆದ ಅವಾಂತರಗಳು ಒಂದಾ.. ಎರಡಾ..? ಬೇಸಿಗೆ ಮಳೆಗೆ ಇಡೀ ಸಿಲಿಕಾನ್ ಸಿಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ