Breaking News
Home / Uncategorized / ಕುಸಿದ ಅಂತರ್ಜಲ ಮಟ್ಟ: ಬರಿದಾಗಿವೆ ಬೆಳವಿ, ಯಾದಗೂಡ ಕೆರೆ

ಕುಸಿದ ಅಂತರ್ಜಲ ಮಟ್ಟ: ಬರಿದಾಗಿವೆ ಬೆಳವಿ, ಯಾದಗೂಡ ಕೆರೆ

Spread the love

ಹುಕ್ಕೇರಿ: ಭೀಕರ ಬರದ ಹಿನ್ನೆಲೆಯಲ್ಲಿ ತಾಲ್ಲೂಕಿನ ಯಾದಗೂಡ ಮತ್ತು ಬೆಳವಿ ಗ್ರಾಮದಲ್ಲಿನ ಕೆರೆಗಳ ಒಡಲು ಬರಿದಾಗಿದೆ. ಪ್ರತಿವರ್ಷ ಉತ್ತಮ ಮಳೆಯಾಗಿ, ಬೇಸಿಗೆಯಲ್ಲೂ ಕೆರೆಗಳಲ್ಲಿ ಒಂದಿಷ್ಟು ನೀರು ಸಂಗ್ರಹವಿರುತ್ತಿತ್ತು.ಹುಕ್ಕೇರಿ | ಕುಸಿದ ಅಂತರ್ಜಲ ಮಟ್ಟ: ಬರಿದಾಗಿವೆ ಬೆಳವಿ, ಯಾದಗೂಡ ಕೆರೆಯೊಡಲು

ಆದರೆ, ಕಳೆದ ವರ್ಷ ಮಳೆಯಾಗದ ಹಿನ್ನೆಲೆಯಲ್ಲಿ ಈ ಬಾರಿ ನೀರಿಲ್ಲದೆ ಭಣಗುಡುತ್ತಿವೆ.

ಇದರಿಂದಾಗಿ ಪಕ್ಕದ ಜಮೀನುಗಳಲ್ಲಿ ಕೊರೆಯಿಸಿರುವ ತೆರೆದಬಾವಿ ಮತ್ತು ಕೊಳವೆಬಾವಿಗಳಲ್ಲೂ ಅಂತರ್ಜಲ ಮಟ್ಟ ಕುಸಿದಿದೆ.

ಕೆರೆಯನ್ನೇ ನಂಬಿಕೊಂಡು ಕೃಷಿ ಮಾಡುತ್ತಿದ್ದವರಿಗೆ ತೊಂದರೆಯಾಗಿದೆ. ಇಂದು ಅಥವಾ ನಾಳೆ ದೊಡ್ಡ ಮಳೆ ಸುರಿಯಬಹುದು. ಕೆರೆ ತುಂಬಬಹುದು ಎಂಬ ನಿರೀಕ್ಷೆಯಲ್ಲಿ ಅವರು ಮುಂಗಾರು ಹಂಗಾಮಿನ ಬಿತ್ತನೆಗೆ ಸಿದ್ಧವಾಗುತ್ತಿದ್ದಾರೆ.

ಕೆರೆ ತುಂಬಿಸುವ ಯೋಜನೆ:

ಪ್ರತಿವರ್ಷ ಬೇಸಿಗೆಯಲ್ಲಿ ಬರಿದಾಗುವ ತಾಲ್ಲೂಕಿನ 28 ಕೆರೆಗಳಿಗೆ ಹಿರಣ್ಯಕೇಶಿ ನದಿಯಿಂದ ನೀರು ತುಂಬಿಸುವ ಮಹತ್ವಕಾಂಕ್ಷಿ ಯೋಜನೆಯನ್ನು ಹುಕ್ಕೇರಿ ಕ್ಷೇತ್ರದ ಹಿಂದಿನ ಶಾಸಕ ದಿ.ಉಮೇಶ ಕತ್ತಿ ಕೈಗೊಂಡಿದ್ದರು. ಇದಕ್ಕಾಗಿ ಸಂಕೇಶ್ವರದ ಬಳಿ ₹9 ಕೋಟಿ ವೆಚ್ಚದಲ್ಲಿ ಜಾಕ್‌ವೆಲ್ ನಿರ್ಮಿಸಿದ್ದರು.

ಪ್ರತಿವರ್ಷ ಮಳೆಗಾಲದಲ್ಲಿ ನದಿಯಿಂದ ಈ ಕೆರೆಗಳಿಗೆ ನೀರು ಹರಿಸಲಾಗುತ್ತದೆ. ಯಾದಗೂಡ, ಬೆಳವಿ ಕೆರೆಗಳು ಇದರಲ್ಲಿವೆ. ಇಳಿಜಾರು ಪ್ರದೇಶದಲ್ಲಿರುವ ಕೆರೆಗಳು ಪೂರ್ತಿ ತುಂಬಿದರೆ, ಎತ್ತರ ಪ್ರದೇಶದಲ್ಲಿರುವ ಕೆರೆಗಳಲ್ಲಿ ಅರ್ಧದಷ್ಟು ನೀರು ಸಂಗ್ರಹವಾಗುತ್ತಿತ್ತು.

ಆದರೆ, ವರುಣನ ಅವಕೃಪೆಯಿಂದಾಗಿ ಕಳೆದ ವರ್ಷ ಹಿರಣ್ಯಕೇಶಿ ನದಿಯಲ್ಲೂ ಹೆಚ್ಚಿನ ನೀರು ಸಂಗ್ರಹವಾಗಲಿಲ್ಲ. ಹಾಗಾಗಿ ಈ ಕೆರೆಗಳಿಗೂ ನಿರೀಕ್ಷೆಯಂತೆ ಬಾರದ್ದರಿಂದ ಸಮಸ್ಯೆ ತಲೆದೋರಿದೆ.

‘ಯಾದಗೂಡದ ಎರಡು ಕೆರೆ ಮತ್ತು ಬೆಳವಿಯ ಕೆರೆ ಬತ್ತಿದ್ದರಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗಿದೆ. ಅಲ್ಲಿಲ್ಲಿ ಅಲೆದಾಡಿ ನೀರು ತರುವಂತಾಗಿದೆ’ ಎಂದು ಬೆಳವಿಯ ರೈತ ನಿಂಗಪ್ಪ ಜರಳಿ ಅಳಲು ತೋಡಿಕೊಂಡರು.


Spread the love

About Laxminews 24x7

Check Also

ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ?ತಿಮ್ಮಾಪುರ

Spread the love ಬಾಗಲಕೋಟೆ: ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ? ಪ್ರಜ್ವಲ್ ಮತ್ತು ಸೂರಜ್ ಆ ಕೆಲಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ