ನೇಸರಗಿ :ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಅವರ 51ನೇ ಹುಟ್ಟು ಹಬ್ಬದ ಪ್ರಯುಕ್ತ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಅಂಗಸಂಸ್ಥೆಯಾದ ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ.,ಯಕ್ಸಂಬಾ. ಶಾಖೆ ನೇಸರಗಿ 53ನೇ ನೂತನ ಶಾಖೆಯ ಉದ್ಘಾಟನೆ ಹಾಗೂ ಪೂಜಾ ಸಮಾರಂಭವನ್ನು ಜಡಿಸಿದ್ದೇಶ್ವರ ಮಠ ಹುಬ್ಬಳ್ಳಿಯ ಶ್ರೀ ಸದ್ಗುರು ರಾಮಾನಂದ ಭಾರತಿ ಮಹಾಸ್ವಾಮಿಗಳು ಇವರ ದಿವ್ಯಸಾನಿಧ್ಯದಲ್ಲಿ ಶ್ರೀಗಳ ಅಮೃತ ಹಸ್ತದಿಂದ ಊರಿನ ಗಣ್ಯರು, ಜನಪ್ರತಿನಿಧಿಗಳು, ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಚಂದರಗಿ ಶಾಲೆಯ ನಿರ್ದೇಶಕರಾದ ಶ್ರೀ ರುದ್ರಗೌಡ ಪಾಟೀಲ, ಊರಿನ ಮುಖಂಡರಾದ ಶ್ರೀ ಚನಗೌಡ ಪಾಟೀಲ, ಶ್ರೀ ರಾಜಶೇಖರ್ ಗೆಜ್ಜಿ, ಸೌ. ಶೋಭಾ ತುಬಾಕಿ, ಜ್ಯೋತಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಬಾಬುರಾವ ಮಾಳಿ, ನಿರ್ದೇಶಕರಾದ ಶ್ರೀ ಕಲ್ಲಪ್ಪ ನಾಯೀಕ, ಶ್ರೀ ಶರಪುದ್ದೀನ ಮುಲ್ಲಾ,ಸಂಸ್ಥೆಯ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು