Breaking News

ಹಾನಗಲ್: ಬಿತ್ತನೆ ಬೀಜದ ಪ್ಯಾಕೇಟ್‌ಗೂ ಬಂತು ಕ್ಯೂಆರ್‌ ಕೋಡ್‌

Spread the love

ಹಾನಗಲ್: ಬಿತ್ತನೆ ಬೀಜಗಳ ನಕಲಿ ಹಾವಳಿ ತಡೆಯುವ ನಿಟ್ಟಿನಲ್ಲಿ ಮುಂಗಾರು ಪೂರ್ವದಿಂದಲೇ ಕೃಷಿ ಇಲಾಖೆ ಬಿತ್ತನೆ ಬೀಜಗಳ ಪ್ಯಾಕೇಟ್‌ ಮೇಲೆ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಕಡ್ಡಾಯಗೊಳಿಸಿದೆ. ರೈತರಿಗೆ ಪ್ರಮಾಣೀಕೃತ ಬೀಜಗಳ ವಿತರಣೆ ಮತ್ತು ಅಕ್ರಮ ದಾಸ್ತಾನು ತಡೆಗಟ್ಟುವ ಉದ್ದೇಶ ಹೊಂದಲಾಗಿದೆ.

 

ಕೃಷಿ ಇಲಾಖೆ ಬಿತ್ತನೆ ಬೀಜಗಳನ್ನು ಸಂಗ್ರಹಿಸಿಕೊಂಡು ತಾಲ್ಲೂಕಿನ 9 ಕೇಂದ್ರಗಳ ಮೂಲಕ ವಿತರಣೆ ಆರಂಭಿಸಿದೆ. ಸಹಾಯಧನದ ವಿತರಣಾ ಕೇಂದ್ರಗಳಿಗೆ ರೈತರು ಆಗಮಿಸಿ ಬೀಜ ಖರೀದಿಯಲ್ಲಿ ತೊಡಗಿದ್ದಾರೆ. ಬೀಜ ವಿತರಣೆ ಮತ್ತು ಖರೀದಿ ಹಣ ಸಂದಾಯಕ್ಕೆ ಇಲಾಖೆ ಅಳವಡಿಸಿಕೊಂಡಿರುವ ಡಿಜಿಟಲ್ ವ್ಯವಸ್ಥೆಗೆ ಈಗ ರೈತರೂ ಒಗ್ಗಿಕೊಳ್ಳಬೇಕಾಗಿದೆ.

ಹಾನಗಲ್: ಬಿತ್ತನೆ ಬೀಜದ  ಪ್ಯಾಕೇಟ್‌ಗೂ ಬಂತು ಕ್ಯೂಆರ್‌ ಕೋಡ್‌

ಬೀಜ ವಿತರಣೆ ಸಮಯದಲ್ಲಿ ಪ್ರತಿ ಪ್ಯಾಕೆಟ್‌ ಮೇಲೆ ಬಾರ್‌ಕೋಡ್‌ ಸ್ಕ್ಯಾನ್‌ ಆದ ಬಳಿಕವೇ ಖರೀದಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಬೀಜ ವಿತರಣಾ ಕೇಂದ್ರಗಳಲ್ಲಿ ರೈತರು ಖರೀದಿಸುವ ಬೀಜಗಳ ಪ್ರತಿ ಪ್ಯಾಕೇಟ್‌ ಸ್ಕ್ಯಾನ್‌ ಮಾಡಿದ ನಂತರ ಸೀಡ್‌ ಎಂಐಎಸ್‌ ತಂತ್ರಾಂಶದಲ್ಲಿ ಕ್ಯೂಆರ್‌ ಕೋಡ್‌ ವಿವರ ಮತ್ತು ಇನ್ನುಳಿದ ವಿವರಗಳು ದಾಖಲಾಗುತ್ತವೆ.

ಬಿತ್ತನೆ ಬೀಜಗಳನ್ನು ವಿತರಣಾ ಕೇಂದ್ರದಲ್ಲಿ ದಾಸ್ತಾನು ಮಾಡುವ ಮುನ್ನ ಬೀಜದ ಪ್ಯಾಕೇಟ್‌ಗಳ ಮೇಲೆ ಕ್ಯೂಆರ್‌ ಕೋಡ್‌ ನಮೂದಿಸಿರುವುದನ್ನು ಸಂಬಂಧಿಸಿದ ಅಧಿಕಾರಿಗಳು ಖಚಿತಪಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಖರೀದಿ ಸಮಯದಲ್ಲಿ ಪ್ರತಿ ಪ್ಯಾಕೇಟ್‌ ಸ್ಕ್ಯಾನ್‌ ಮಾಡಿ ತಂತ್ರಾಂಶದಲ್ಲಿ ವಿವರಗಳನ್ನು ನಮೂದು ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಯಾವುದೇ ಕಾರಣಕ್ಕೂ ಕ್ಯೂಆರ್‌ ಕೋಡ್ ದಾಖಲಿಸದಂತೆ ಬೀಜ ವಿತರಣೆ ಮಾಡುವಂತಿಲ್ಲ’ ಎಂದು ಇಲ್ಲಿನ ಎಪಿಎಂಸಿ ಪ್ರಾಂಗಣದ ಬೀಜ ವಿತರಣೆ ಕೇಂದ್ರದ ಅಧಿಕಾರಿ ಸಂಗಮೇಶ ಹಕ್ಲಪ್ಪನವರ ತಿಳಿಸಿದ್ದಾರೆ.


Spread the love

About Laxminews 24x7

Check Also

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Spread the loveನವದೆಹಲಿ: ಕುಟುಂಬ ರಾಜಕಾರಣ ಮಾಡುವ ಪಕ್ಷಗಳು ಮಹಿಳೆಯರ ಸಬಲೀಕರಣವಾದರೆ ತಮ್ಮ ಆಂತರಿಕ ಅಧಿಕಾರ ಅಧಿಕಾರಕ್ಕೆ ಧಕ್ಕೆಯಾಗಬಹುದು ಎಂಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ