Breaking News

ಯೋಧ ನಿಧನ ; ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

Spread the love

ಖಾನಾಪುರ : ತಾಲೂಕಿನ ಕಕ್ಕೇರಿ ಗ್ರಾಮದ ಯೋಧ ಮಂಜುನಾಥ ಅಂಬಡಗಟ್ಟಿ ( 35 ) ಮಂಗಳವಾರ ನಿಧನರಾಗಿದ್ದು, ಇಂದು ಅವರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ತರಲಾಗಿದೆ.

ಭಾರತೀಯ ಸೇನೆಯ ಇಂಜಿನಿಯರ್ ರೆಜಿಮೆಂಟ್ ನಲ್ಲಿ ಕಳೆದ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಕಳೆದ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು.

ಖಾನಾಪುರದ ಯೋಧ ನಿಧನ ; ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ದೆಹಲಿಯ ಮಿಲಿಟರಿ ಬಿ‌.ಎಸ್  ದಾಖಲಾಗಿದ್ದ ಇವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ನಿಧನ ಹೊಂದಿದ್ದಾರೆ. ಮೃತರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ತರಲಾಗಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ