Breaking News

ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳವು

Spread the love

ಕುಶಾಲನಗರ: ತಾಲೂಕಿನ ‌ಮಾದಾಪಟ್ಟಣ ಗ್ರಾಮದ ನಿವಾಸಿ ಪೊಲೀಸ್ ಕಾನ್‌ಸ್ಟೆಬಲ್ ಸುನಿಲ್ ಕುಮಾರ್ ಎಂಬುವರ ಮನೆ ಹಿಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಲ್ಮೇರಾ ಒಡೆದು ₹15 ಸಾವಿರ ನಗದು ಹಾಗೂ 40 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ.

ಮಾದಾಪಟ್ಟಣ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳವು

ಇದೇ ಮನೆಯ ಹಿಂಭಾಗದಲ್ಲಿರುವ ಮನೆಯಲ್ಲಿಯೂ ಕಳವಿಗೆ ಪ್ರಯತ್ನಿಸಿದ್ದಾರೆ.

ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ವಿಧಿವಿಜ್ಞಾನ, ಹಾಗೂ ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಆದರೆ ಕಳ್ಳರ ಸುಳಿವು ಮಾತ್ರ ಪತ್ತೆಯಾಗಿಲ್ಲ. ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ