Breaking News

ರಾಜೀನಾಮೆ ಪಡೆಯಬೇಕು,ಈಶ್ವರಪ್ಪ ಕೇಸ್‌ನಲ್ಲಿ ಹೀಗಿರಲಿಲ್ಲ: ಬೊಮ್ಮಾಯಿ

Spread the love

ರಾಜೀನಾಮೆ ಪಡೆಯಬೇಕು,ಈಶ್ವರಪ್ಪ ಕೇಸ್‌ನಲ್ಲಿ ಹೀಗಿರಲಿಲ್ಲ: ಬೊಮ್ಮಾಯಿ

ಕೊಪ್ಪಳ: ವಾಲ್ಮೀಕಿ ನಿಗಮದ ಅಧಿಕಾರಿ ಸಾವಿನ ಪ್ರಕರಣದಲ್ಲಿ ಡೆತ್‌ನೋಟ್‌ನಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಸಿಎಂ ಅವರು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯ ಮಾಡಿದರು.

Minister Nagendra ರಾಜೀನಾಮೆ ಪಡೆಯಬೇಕು,ಈಶ್ವರಪ್ಪ ಕೇಸ್‌ನಲ್ಲಿ ಹೀಗಿರಲಿಲ್ಲ: ಬೊಮ್ಮಾಯಿ

ಕೊಪ್ಪಳ ಗವಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಡೆತ್‌ನೋಟ್‌ನಲ್ಲಿ ಎಲ್ಲವೂ ಉಲ್ಲೇಖವಾಗಿದೆ.

ಬ್ಯಾಂಕ್‌ಗೆ ಹಣ ವರ್ಗಾವಣೆಯಾಗಿದೆ. ಮೌಖಿಕ ಆದೇಶ ಮಾಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಿದ್ದಾರೆ. ಆದರೆ ಈಶ್ವರಪ್ಪ ಕೇಸ್‌ನಲ್ಲಿ ಇಂಥಹ ಡೆತ್‌ನೋಟ್ ಇರಲಿಲ್ಲ. ಇಲ್ಲಿ ಅಧಿಕಾರಿಯ ಕೈ ಬರಹವೇ ಇದೆ. ಹಣ ಹೋಗಿರುವುದು ಬ್ಯಾಂಕ್ ದಾಖಲೆಯಿಂದ ಸ್ಪಷ್ಟವಾಗಿದೆ. ಇಷ್ಟೆಲ್ಲಾ ನಡೆದರೂ ಸಹಿತ ಇಲಾಖೆ ಸಚಿವರು ನಾನು ಮಂತ್ರಿಯಾಗಿ ಮುಂದುವರೆಯುವೆ ಎಂದರೆ ಇದು ಭಂಡತನ ಅಲ್ಲದೇ ಮತ್ತೇನು ಎಂದರು.

ಹಿಂದೆ ಈಶ್ವರಪ್ಪ ಅವರು ಮಾಡದಿರುವ ತಪ್ಪಿಗೆ ಅವರು ರಾಜೀನಾಮೆ ತೆಗೆದುಕೊಂಡರು. ಈ ಸರ್ಕಾರದಲ್ಲಿ ಎಲ್ಲವೂ ದಾಖಲೆ ಇವೆ. ಇವರಲ್ಲಿ ಹಗಲು ದರೋಡೆ ನಡೆದಿದೆ. ಇಲಾಖೆ ಹಣವು ವಿವಿಧ ಖಾತೆಗಳು ಹಾಗೂ ತೆಲಂಗಾಣ ಸಹಕಾರಿ ಸಂಘಕ್ಕೆ ಹಣ ಹೋಗುತ್ತದೆ ಎಂದರೆ ಈ ಸರ್ಕಾರ ಆಡಳಿತ ಮಾಡುತ್ತಿದೆಯಾ ? ಇದನ್ನು ಸರ್ಕಾರ ಎಂದು ಕರೆಯಬೇಕಾ ಎಂದು ವಾಗ್ಧಾಳಿ ನಡೆಸಿದರು.


Spread the love

About Laxminews 24x7

Check Also

DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI

Spread the love ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ