Breaking News

ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು. :ಈಶ್ವರಪ್ಪ

Spread the love

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿದೆ. ಸಾಮೂಹಿಕ ನಾಯಕತ್ವ ಪಕ್ಷದಲ್ಲಿ ಬರಬೇಕು. ಪಕ್ಷ ಶುದ್ದೀಕರಣ ಆಗಬೇಕು ಎನ್ನುವುದು ನನ್ನ ಹೋರಾಟದ ಉದ್ದೇಶ ಎಂದು ಕೆ.ಎಸ್. ಈಶ್ವರಪ್ಪ ಬಿಎಸ್ ವೈ ಹಾಗೂ ಮಕ್ಕಳ ವಿರುದ್ಧ ಗುಡುಗಿದರು.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಹಿಂದೆ ಬಿಜೆಪಿಯಲ್ಲಿ ಸಾಮೂಹಿಕ ನಾಯಕತ್ವ ಇತ್ತು.

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು. :ಈಶ್ವರಪ್ಪ ಕಿಡಿ

ಈಗ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿ ಸಿಕ್ಕಿದೆ. ಅಪ್ಪ ಮಕ್ಕಳ ಕೈಯಿಂದ ಪಕ್ಷ ಮುಕ್ತ ಮಾಡಬೇಕು ಎಂಬ ಆಪೇಕ್ಷೆ ಕಾರ್ಯಕರ್ತರು ಮತ್ತು ನಾಯಕರಲ್ಲಿದೆ ಎಂದರು.

ನರೇಂದ್ರ ಮೋದಿ ಅವರು ಕಾಂಗ್ರೆಸ್ ಕುಟುಂಬ ರಾಜ ಕಾರಣ ಮುಕ್ತ ಮಾಡಬೇಕು ಎನ್ನುತ್ತಾರೆ. ಆದರೆ, ರಾಜ್ಯ ಬಿಜೆಪಿ ಬಿಎಸ್ ವೈ, ರಾಘವೇಂದ್ರ, ವಿಜಯೇಂದ್ರ ಕೈಯಲ್ಲಿದೆ. ಪಕ್ಷವನ್ನು ಅಪ್ಪ ಮಕ್ಕಳಿಂದ ಮುಕ್ತ ಮಾಡಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Spread the love ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಣಿಪಾಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ