Breaking News

ಈ ಬಾರಿ ಚುನಾವಣೆ ವೇಳೆ ದಾಖಲೆಯ ₹1100 ಕೋಟಿ ಹಣ ವಶ! ಯಾವ ರಾಜ್ಯದಲ್ಲಿ ಹೆಚ್ಚು?

Spread the love

IT Department seizes record Cash: ಈ ಬಾರಿಯ ಲೋಕಸಭೆ ಚುನಾವಣೆ-2024 ವೇಳೆ ಆದಾಯ ತೆರಿಗೆ ಇಲಾಖೆ ದಾಖಲೆಯ ₹1100 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು (Lok Sabha Election 2024) ವಶಪಡಿಸಿಕೊಂಡಿದೆ.

ಈ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.Lok Sabha Election: ಈ ಬಾರಿ ಚುನಾವಣೆ ವೇಳೆ ದಾಖಲೆಯ ₹1100 ಕೋಟಿ ಹಣ ವಶ! ಯಾವ ರಾಜ್ಯದಲ್ಲಿ ಹೆಚ್ಚು?

ಮೇ 30 ರ ಅಂತ್ಯದ ವೇಳೆಗೆ ಆದಾಯ ತೆರಿಗೆ ಇಲಾಖೆಯು ಸುಮಾರು 1,100 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ, ಇದು 2019 ರ ಲೋಕಸಭೆ ಚುನಾವಣೆಯಲ್ಲಿ ವಶಪಡಿಸಿಕೊಂಡ 390 ಕೋಟಿ ರೂಪಾಯಿಗಿಂತ ಶೇ.182 ರಷ್ಟು ಹೆಚ್ಚು. ಈ ಅಂಕಿ ಅಂಶವು ಮತ್ತಷ್ಟು ಹೆಚ್ಚಾಗಬಹುದು, ಎಂದು ಹೇಳಲಾಗುತ್ತಿದ್ದು, ಏಕೆಂದರೆ ಚುನಾವಣೆ ವೇಳೆ ಅಕ್ರಮ ಹಣ ವರ್ಗಾವಣೆ ಕಾರ್ಯಾಚರಣೆಯು ಇನ್ನೂ ನಡೆಯುತ್ತಿದೆ.

ಮಾರ್ಚ್ 16 ರಂದು ಭಾರತದಲ್ಲಿ ಮಾದರಿ ನೀತಿ ಸಂಹಿತೆ (MCC) ಜಾರಿಗೆ ಬಂದಿತ್ತು, ಅದೇ ದಿನ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯ ದಿನಾಂಕಗಳನ್ನೂ ಘೋಷಿಸಿತ್ತು. ಅಂದಿನಿಂದ ಆದಾಯ ತೆರಿಗೆ ಇಲಾಖೆ ಲೆಕ್ಕಕ್ಕೆ ಸಿಗದ ನಗದು ಮತ್ತು ಬೆಲೆಬಾಳುವ ವಸ್ತುಗಳ ಮೇಲೆ ನಿಗಾ ಇರಿಸಿದೆ. ಮೂಲಗಳ ಪ್ರಕಾರ, ದೆಹಲಿ ಮತ್ತು ಕರ್ನಾಟಕ, ತಮಿಳುನಾಡು ಗರಿಷ್ಠ ಹಣ, ಆಭರಣ ವಶಪಡಿಸಿಕೊಂಡ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ಪ್ರತಿ ರಾಜ್ಯದಲ್ಲಿ 200 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಗದು ಮತ್ತು ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಮಿಳುನಾಡು ಎರಡನೇ ಸ್ಥಾನ

ಅಕ್ರಮ ಹಣ ವಶಪಡಿಸಿಕೊಂಡ ಪಟ್ಟಿಯಲ್ಲಿ ತಮಿಳುನಾಡು ಎರಡನೇ ಸ್ಥಾನದಲ್ಲಿದೆ, ಇಲ್ಲಿಂದ 150 ಕೋಟಿ ರೂ. ಆಂಧ್ರಪ್ರದೇಶ, ತೆಲಂಗಾಣ ಮತ್ತು ಒಡಿಶಾದಲ್ಲಿ 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಗದು ಮತ್ತು ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾರತದಲ್ಲಿ ಮಾದರಿ ನೀತಿ ಸಂಹಿತೆಯ ಅನುಷ್ಠಾನದ ನಂತರ ಚುನಾವಣಾ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಏಜೆನ್ಸಿಗಳನ್ನು ಹೆಚ್ಚಿನ ಎಚ್ಚರಿಕೆಯನ್ನು ಇರಿಸಲಾಗಿತ್ತು.

ನಿಯಂತ್ರಣ ಕೊಠಡಿಗಳ ಸ್ಥಾಪನೆ

ಪ್ರತಿ ರಾಜ್ಯವು ನಗದು ಅಕ್ರಮ ಸಾಗಣೆಯನ್ನು ಪರಿಶೀಲಿಸಲು 24×7 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿದೆ. ಮಾದರಿ ನೀತಿ ಸಂಹಿತೆ (MCC) ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಅನ್ವಯಿಸುತ್ತದೆ. ಅನೈತಿಕ ಆಚರಣೆಗಳನ್ನು ತಡೆಗಟ್ಟುವುದು ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದೆ. ಈ ಅವಧಿಯಲ್ಲಿ ಯಾವುದೇ ಪೂರಕ ದಾಖಲೆಗಳಿಲ್ಲದೆ 50,000 ರೂ.ಗಿಂತ ಹೆಚ್ಚು ನಗದು ಅಥವಾ 10,000 ರೂ.ಗಿಂತ ಹೆಚ್ಚು ಮೌಲ್ಯದ ಹೊಸ ವಸ್ತುಗಳನ್ನು ಸಾಗಿಸುವುದು ಕಂಡುಬಂದರೆ ಆ ವಸ್ತುಗಳನ್ನು ಜಪ್ತಿ ಮಾಡಲಾಗುತ್ತದೆ.

ಆದಾಗ್ಯೂ, ವಶಪಡಿಸಿಕೊಂಡ ನಗದು 10 ಲಕ್ಷ ರೂ.ಗಿಂತ ಹೆಚ್ಚಿದ್ದರೆ, ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಗೆ ಕಳುಹಿಸಲಾಗುತ್ತದೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ