Breaking News

ಹೆಸರು ಬದಲಿಸಿಕೊಂಡ ಶಶಿಕುಮಾರ್‌ ಪುತ್ರ ಅಕ್ಷಿತ್‌

Spread the love

ನಾಯಕ-ನಾಯಕಿಯರು ತಮ್ಮ ಮೂಲ ಹೆಸರು ಬದಲಿಸಿಕೊಂಡು ಆಗಾಗ ಅದೃಷ್ಟ ಪರೀಕ್ಷೆಗಿಳಿಯುತ್ತಾರೆ. ಈಗ ನಟ ಶಶಿಕುಮಾರ್‌ ಪುತ್ರ ಕೂಡಾ ತಮ್ಮ ಹೆಸರು ಬದಲಿಸಿಕೊಂಡಿದ್ದಾರೆ. ಅಕ್ಷಿತ್‌ ಎಂಬ ಹೆಸರನ್ನು ಆದಿತ್ಯ ಎಂದು ಬದಲಿಸಿಕೊಂಡಿದ್ದಾರೆ. ಈ ಹೆಸರಿನೊಂದಿಗೆ ಈಗ ತೆರೆಮೇಲೆ ಬರಲು ಸಜ್ಜಾಗಿದ್ದಾರೆ.

ಅದು “ಕಾದಾಡಿ’ ಮೂಲಕ. ಇದು ಅದಿತ್ಯ ನಟನೆಯ ಹೊಸ ಸಿನಿಮಾ

.Kaadaadi Movie: ಹೆಸರು ಬದಲಿಸಿಕೊಂಡ ಶಶಿಕುಮಾರ್‌ ಪುತ್ರ ಅಕ್ಷಿತ್‌

ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಸತೀಶ್‌ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಂಸ್‌ ಮುಖಾಂತರ ನಿರ್ಮಾಣ ಮಾಡಿದ್ದಾರೆ.

ನಾಯಕನ ಪರಿಚಯದ ಎರಡನೇ ಲಿರಿಕಲ್‌ ವಿಡಿಯೋ ಹಾಡನ್ನು ಬಿಡುಗಡೆ ಮಾಡಿದೆ ತಂಡ. ಎನ್‌.ಮಾರುತಿ ಸಾಹಿತ್ಯದ “ಕಲೆಯು ಇರಬೇಕು, ಮನೆಯು ಇರಬೇಕು, ಗುಡಿಯು ಇರಬೇಕು, ಕುಲವೂ ಇರಬೇಕು. ಸಹನೆಯು ಇರಬೇಕು, ಸಾಧನೆಯು ಇರಬೇಕು, ಗೆಲುವು ಇರಬೇಕು, ಸೋತರೂ ಗೆಲ್ಲುವ ಛಲವು ಇರಬೇಕು’ ಹಾಡಿಗೆ ಶಶಾಂಕ್‌ ಶೇಷಗಿರಿ ಧ್ವನಿಯಾಗಿದ್ದಾರೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ