ಬೆಂಗಳೂರು, ಜೂನ್ 02: 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿವೆ. ಶಾಲೆಗಳು ಬಾಗಿಲು ತೆರೆದಿದ್ದು, ಮಕ್ಕಳು ಆಗಮಿಸುತ್ತಿದ್ದಾರೆ. ಶಾಲೆಗಳಲ್ಲಿ ‘ಕ್ಷೀರಭಾಗ್ಯ ಯೋಜನೆ’ ಆರಂಭಿಸುವ ಕುರಿತು ಶಾಲೆಗಳಿಗೆ, ಮುಖ್ಯ ಶಿಕ್ಷಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ.
‘ಕ್ಷೀರಭಾಗ್ಯ ಯೋಜನೆ’ಯಡಿ ಮಕ್ಕಳಿಗೆ ಶಾಲೆಯಲ್ಲಿ ಹಾಲು ನೀಡಲಾಗುತ್ತದೆ. 2024-25ನೇ ಸಾಲಿಗೆ ಅಗತ್ಯವಿರುವ ಹಾಲಿನ ಪುಡಿ ಆಯಾ ತಿಂಗಳ ಬೇಡಿಕೆಗೆ ಅನುಗುಣವಾಗಿ ಜಿಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಸಮಾಲೋಚಿಸಿ ಶಾಲಾವಾರು ಹಾಗೂ ತಾಲ್ಲೂಕುವಾರು ಬೇಡಿಕೆಯನ್ನು ಸಿದ್ಧಪಡಿಸಿ ಸಂಬಂಧಿಸಿದ ಜಿಲ್ಲೆಗಳಿಗೆ ಹಾಲಿನ ಪುಡಿ ಸರಬರಾಜುಗೊಳಿಸುವ ಹಾಲು ಒಕ್ಕೂಟ ಘಟಕಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.