Breaking News

ಜಲಮೂಲಗಳ ಅತಿಕ್ರಮಣ: ಅಂಬೇಡ್ಕರ್‌ ಕೆರೆಯೊಡಲು ಬರಿದು…

Spread the love

ಬೆಳಗಾವಿ: ಒಂದು ಕಾಲಕ್ಕೆ ಕೃಷಿ ಚಟುವಟಿಕೆ ಕೈಗೊಳ್ಳಲು ರೈತರಿಗೆ ನೆರವಾಗಿದ್ದ, ಅಕ್ಕಪಕ್ಕದ ಜಮೀನುಗಳ ಕೊಳವೆಬಾವಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಿದ ಇಲ್ಲಿನ ಅನಗೋಳದ ಅಂಬೇಡ್ಕರ್‌ ಕೆರೆ ಈಗ ಬರಿದಾಗಿದ್ದು, ಆಟದ ಮೈದಾನವಾಗಿ ಮಾರ್ಪಟ್ಟಿದೆ. ಇದನ್ನು ಮಾದರಿಯಾಗಿ ಅಭಿವೃದ್ಧಿಪಡಿಸಬೇಕೆಂಬ ಬೇಡಿಕೆ ನನೆಗುದಿಗೆ ಬಿದ್ದಿದೆ.

ಬೆಳಗಾವಿ | ಜಲಮೂಲಗಳ ಅತಿಕ್ರಮಣ: ಅಂಬೇಡ್ಕರ್‌ ಕೆರೆಯೊಡಲು ಬರಿದು...

9 ಎಕರೆ ಪರಿಸರದಲ್ಲಿ ಹರಡಿಕೊಂಡಿರುವ ಕೆರೆಯಲ್ಲಿ ಈ ಹಿಂದೆ ಬೇಸಿಗೆಯವರೆಗೂ ನೀರು ಸಂಗ್ರಹವಿರುತ್ತಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಚಳಿಗಾಲದ ಹೊತ್ತಿಗೆ ಕೆರೆಯೊಡಲು ಖಾಲಿಯಾಗುತ್ತಿದೆ.

ಹಾಗಾಗಿ ನಿತ್ಯ ಸಂಜೆಯಾಗುತ್ತಿದ್ದಂತೆ ಇಲ್ಲಿಗೆ ಲಗ್ಗೆ ಇಡುತ್ತಿರುವ ಯುವಕರು ಮತ್ತು ಮಕ್ಕಳು, ಕ್ರಿಕೆಟ್‌, ಫುಟ್‌ಬಾಲ್‌ ಆಟವಾಡಲು ಕೆರೆ ಬಳಸಿಕೊಳ್ಳುತ್ತಿದ್ದಾರೆ.

ಜಲಮೂಲಗಳ ಅತಿಕ್ರಮಣ: ‘ದಶಕದ ಹಿಂದೆ ಅನಗೋಳದಲ್ಲಿ ಉತ್ತಮ ಮಳೆಯಾದರೆ, ಕೆರೆಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿತ್ತು. ಮುಖ್ಯರಸ್ತೆಗೆ ಹೊಂದಿಕೊಂಡ ಕೆರೆ ಜೀವಜಲದಿಂದ ಮೈದುಂಬಿಕೊಂಡು ಕಂಗೊಳಿಸುತ್ತಿತ್ತು. ಆದರೆ, ಈಗ ಜಲಮೂಲಗಳ ಅತಿಕ್ರಮಣವಾಗಿದೆ. ಕೆರೆಗೆ ನೀರು ಹರಿದುಬರುವ ಮಾರ್ಗದಲ್ಲಿ ಮನೆಗಳು ತಲೆ ಎತ್ತಿವೆ. ಇದರಿಂದಾಗಿ ಕೆರೆ ತುಂಬುತ್ತಿಲ್ಲ. ಈ ವರ್ಷ ವರುಣ ಕೈಕೊಟ್ಟ ಪರಿಣಾಮ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ’ ಎಂದು ಸ್ಥಳೀಯರು ಆರೋಪಿಸಿದರು.

ಶುಚಿತ್ವ ಮಾಯ: ‘ನಿತ್ಯ ಬೆಳಿಗ್ಗೆ ಮತ್ತು ಸಂಜೆ ವಾಯುವಿಹಾರಕ್ಕಾಗಿ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಆದರೆ, ನಿರೀಕ್ಷೆಯಂತೆ ಮೂಲಸೌಕರ್ಯವಿಲ್ಲ. ಶುಚಿತ್ವವೂ ಮಾಯವಾಗಿದೆ. ಗಿಡಗಂಟಿಗಳು ಹೇರಳವಾಗಿ ಬೆಳೆದಿದ್ದು, ಅನಾರೋಗ್ಯಕರ ವಾತಾವರಣ ನಿರ್ಮಾಣವಾಗಿದೆ’ ಎಂದು ಸ್ಥಳೀಯ ರವಿ ಕೊಂಕಣಿ ಬೇಸರಿಸಿದರು.


Spread the love

About Laxminews 24x7

Check Also

DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI

Spread the love ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ