ಬೆಂಗಳೂರು, ಜು.11-ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ ಎಂದಿದ್ದಾರೆ.