Breaking News

ಗ್ಯಾರಂಟಿ’ ಕೈ ಹಿಡಿಯುವ ನಿರೀಕ್ಷೆ ಹುಸಿಯಾಗಿದೆ, ಸೋಲಿನ ಕುರಿತು ವರಿಷ್ಠರಿಗೆ ವರದಿ: ಆಲಗೂರ

Spread the love

ವಿಜಯಪುರ : ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಕಾರಣಗಳ ವರದಿ ನೀಡುವಂತೆ ಕಾಂಗ್ರೆಸ್ ಪಕ್ಷದ ಕರ್ನಾಟಕ ರಾಜ್ಯದ ಉಸ್ತುವಾರಿ ರಂದೀಪ ಸುರ್ಜೇವಾಲಾ ಸೂಚಿಸಿದ್ದಾರೆ ಎಂದು ಲೋಕಸಭೆ ಚುನಾವಣೆಯಲ್ಲಿನ ಪರಾಜಿತ ಅಭ್ಯರ್ಥಿ ರಾಜು ಆಲಗೂರ ಹೇಳಿದರು.

'ಗ್ಯಾರಂಟಿ' ಕೈ ಹಿಡಿಯುವ ನಿರೀಕ್ಷೆ ಹುಸಿಯಾಗಿದೆ, ಸೋಲಿನ ಕುರಿತು ವರಿಷ್ಠರಿಗೆ ವರದಿ: ಆಲಗೂರ

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲ ಅವರು ಇಂದು ಬೆಳಿಗ್ಗೆ ಕರೆ ಮಾಡಿ ಮಾತನಾಡಿದರು. ಸೋಲಿನ ಕುರಿತು ಮಾಹಿತಿ ಪಡೆದ ಅವರು, ಈ ಕುರಿತು ವರದಿ ನೀಡುವಂತೆ ಸೂಚಿಸಿದ್ದಾರೆ. ಶೀಘ್ರವೇ ವಿಜಯಪುರ ಕ್ಷೇತ್ರದಲ್ಲಿನ ಸೋಲಿನ ಕುರಿತು ವರಿಷ್ಠರಿಗೆ ವರದಿ ನೀಡುವುದಾಗಿ ಹೇಳಿದರು.

ವ್ಯವಸ್ಥಿತ ಪ್ರಚಾರದ ಮಧ್ಯೆಯೂ ಸೋಲಾಗಿದ್ದು, ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ರಾಜ್ಯದಲ್ಲಿ ನಮ್ಮ ಸರ್ಕಾರವಿದ್ದು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯುವ ನಿರೀಕ್ಷೆ ಹುಸಿಯಾಗಿದೆ ಎಂದರು.

ಕ್ಷೇತ್ರದಲ್ಲಿನ ಸರ್ಕಾರದ ಸಚಿವರು, ಕಾಂಗ್ರೆಸ್ ಶಾಸಕರು ನನ್ನ ಗೆಲುವಿಗಾಗಿ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ಇದರ ಹೊರತಾಗಿಯೂ ಸಚಿವರು, ಪಕ್ಷದ ಶಾಸಕರಿರುವ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭಾರಿ ಹಿನ್ನಡೆ ಅನುಭವಿಸಿದೆ ಎಂದರು


Spread the love

About Laxminews 24x7

Check Also

ಮೊಹರಂ ಹಬ್ಬ‌ ಸಮೀಪ ಹಿನ್ನಲೆ, ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ ಮುಖಂಡರ ಸಭೆ

Spread the love ಮೊಹರಂ ಹಬ್ಬ‌ ಸಮೀಪ ಹಿನ್ನಲೆ, ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ ಮುಖಂಡರ ಸಭೆ…. ಪೊಲೀಸ್ ಇಲಾಖೆಗೆ ಅಗತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ