Breaking News

ಅಭಿವೃದ್ಧಿ ಹೆಸರಲ್ಲಿ ಪರಿಸರ ನಾಶ ಸಲ್ಲ:

Spread the love

ವದತ್ತಿ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಅರಣ್ಯ ಇಲಾಖೆ, ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದಿಂದ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನ ಸೆಷನ್ಸ್‌ ನ್ಯಾಯಾಧೀಶೆ ಸುಮಲತಾ ಬೆಣ್ಣಿಕಲ್ಲ ಅವರು ಸಸಿಗೆ ನೀರುಣಿಸಿ ಚಾಲನೆ ನೀಡಿದರು.

 

ಈ ವೇಳೆ ಮಾತನಾಡಿದ ಅವರು, ‘ಮನುಷ್ಯನ ದುರಾಸೆಯಿಂದ ಪ್ರಾಣಿ-ಪಕ್ಷಿಗಳು ಅವಸಾನದತ್ತ ಸಾಗಿವೆ. ಪರಿಸರ ಸಮತೋಲನದಿಂದ ಉತ್ತಮ ಮಳೆ, ನಿಯಮಿತ ತಾಪಮಾನ ಸಾಧ್ಯವಿದೆ. ಅಭಿವೃದ್ಧಿ ಹೆಸರಲ್ಲಿ ಪರಿಸರ ಹಾಳು ಮಾಡಬಾರದು’ ಎಂದರು.

ವಕೀಲರ ಸಂಘದ ಅಧ್ಯಕ್ಷ ಎಂ.ಎನ್. ಮುತ್ತಿನ, ವಲಯ ಅರಣ್ಯಾಧಿಕಾರಿ ಶಂಕರ ಅಂತರಗಟ್ಟಿ, ಎಂ.ಎಫ್. ಬಾಡಿಗೇರ, ಲಿಂಗರೆಡ್ಡಿ ಮಂಕಣಿ, ಎಸ್.ಬಿ. ಬಿಸಗುಪ್ಪಿ, ಎಸ್.ಎಂ. ಗೋಂದಕರ, ರಾಜಶೇಖರ ನಿಡವಣಿ, ಬಿ.ಎಂ. ಯಲಿಗಾರ, ಸಿ.ಜಿ. ತುರಮರಿ, ಎಫ್.ಎಂ. ಕಾಳೆ, ಪಿ.ಎನ್. ಡೊಳ್ಳಿನ, ವೈ.ಎನ್. ಪಾಸ್ತೆ, ಎಸ್.ವಿ. ಶಿರಹಟ್ಟಿಮಠ ಇದ್ದರು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ