Breaking News

ಅಭಿವೃದ್ಧಿ ಹೆಸರಲ್ಲಿ ಪರಿಸರ ನಾಶ ಸಲ್ಲ:

Spread the love

ವದತ್ತಿ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಅರಣ್ಯ ಇಲಾಖೆ, ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದಿಂದ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನ ಸೆಷನ್ಸ್‌ ನ್ಯಾಯಾಧೀಶೆ ಸುಮಲತಾ ಬೆಣ್ಣಿಕಲ್ಲ ಅವರು ಸಸಿಗೆ ನೀರುಣಿಸಿ ಚಾಲನೆ ನೀಡಿದರು.

 

ಈ ವೇಳೆ ಮಾತನಾಡಿದ ಅವರು, ‘ಮನುಷ್ಯನ ದುರಾಸೆಯಿಂದ ಪ್ರಾಣಿ-ಪಕ್ಷಿಗಳು ಅವಸಾನದತ್ತ ಸಾಗಿವೆ. ಪರಿಸರ ಸಮತೋಲನದಿಂದ ಉತ್ತಮ ಮಳೆ, ನಿಯಮಿತ ತಾಪಮಾನ ಸಾಧ್ಯವಿದೆ. ಅಭಿವೃದ್ಧಿ ಹೆಸರಲ್ಲಿ ಪರಿಸರ ಹಾಳು ಮಾಡಬಾರದು’ ಎಂದರು.

ವಕೀಲರ ಸಂಘದ ಅಧ್ಯಕ್ಷ ಎಂ.ಎನ್. ಮುತ್ತಿನ, ವಲಯ ಅರಣ್ಯಾಧಿಕಾರಿ ಶಂಕರ ಅಂತರಗಟ್ಟಿ, ಎಂ.ಎಫ್. ಬಾಡಿಗೇರ, ಲಿಂಗರೆಡ್ಡಿ ಮಂಕಣಿ, ಎಸ್.ಬಿ. ಬಿಸಗುಪ್ಪಿ, ಎಸ್.ಎಂ. ಗೋಂದಕರ, ರಾಜಶೇಖರ ನಿಡವಣಿ, ಬಿ.ಎಂ. ಯಲಿಗಾರ, ಸಿ.ಜಿ. ತುರಮರಿ, ಎಫ್.ಎಂ. ಕಾಳೆ, ಪಿ.ಎನ್. ಡೊಳ್ಳಿನ, ವೈ.ಎನ್. ಪಾಸ್ತೆ, ಎಸ್.ವಿ. ಶಿರಹಟ್ಟಿಮಠ ಇದ್ದರು.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ