Breaking News

ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ

Spread the love

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಭೇಟಿ ಬಳಿಕ ಮಾತನಾಡಿದ ಶಾಸಕ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಈಗಾಗಲೇ ದೆಹಲಿಯಲ್ಲಿ ಚರ್ಚೆ ಮಾಡಿ ಬಂದಿದ್ದಾರೆ. ಯಾಕೆ ವಿಳಂಬವಾಗುತ್ತಿದೆ ಎಂದು ಸಿಎಂ ಪ್ರಶ್ನಿಸುವಷ್ಟು ನಾನು ದೊಡ್ಡವನಲ್ಲ. ತಾಳ್ಮೆಯಿಂದ ಕಾಯುತ್ತೇನೆ, ಮನುಷ್ಯನಿಗೆ ತಾಳ್ಮೆ, ಸಂಯಮ ಬಹಳ ಮುಖ್ಯ. ಸಿಎಂ, ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು.

ರಮೇಶ್ ಜಾರಕಿಹೊಳಿಯವರನ್ನು ನೀರಾವರಿ ವಿಚಾರವಾಗಿ ಭೇಟಿ ಮಾಡಿದ್ದೆ. ಅವರು ನಮ್ಮ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ. ರಮೇಶ್ ಜಾರಕಿಹೊಳಿ ಸಂತೋಷ್ ಅವರನ್ನ ಭೇಟಿ ಮಾಡಿದ್ದರಲ್ಲಿ ತಪ್ಪಿಲ್ಲ. ನಾನೂ ದೆಹಲಿಗೆ ಹೋದರೆ ಭೇಟಿ ಮಾಡಿ ಬರುತ್ತೇನೆ ಎಂದರು.

ಕೆಲವು ಸಚಿವರನ್ನು ಕೈ ಬಿಡಬೇಕೆಂಬ ವಿಚಾರದ ಕುರಿತು ಮಾತನಾಡಿದ ಅವರು, ಸಿಎಂ ಮತ್ತು ಅಧ್ಯಕ್ಷರಿಗೆ ಈ ಬಗ್ಗೆ ಹೇಳಿದ್ದೇನೆ. ಅಲ್ಲದೆ ನಾವು ಶಾಸಕರು ರೆಸಾರ್ಟ್ ನಲ್ಲಿ ಸಭೆ ಮಾಡಿಲ್ಲ. ಸಿಎಂ ಮತ್ತು ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ್ದೇವೆ. ನಮ್ಮ ಅಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿದ್ದೇವೆ ಎಂದರು.

ರಮೇಶ್ ಜಾರಕಿಹೊಳಿ ಮತ್ತೊಂದು ಪವರ್ ಸೆಂಟರ್ ಅಲ್ಲ. ಯಾಕೆ ಮಾಧ್ಯಮಗಳು ಅವರನ್ನು ಮತ್ತೊಂದು ಪವರ್ ಸೆಂಟರ್ ಎನ್ನುತ್ತೀರಿ. ವಿನಾಕಾರಣ ಪವರ್ ಸೆಂಟರ್ ಎನ್ನುವುದು ಸರಿಯಲ್ಲ. ಶಾಸಕರ್ಯಾರೂ ಸಚಿವಗಿರಿಗಾಗಿ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆಸಿಲ್ಲ. ರೆಸಾರ್ಟ್ ಗೆ ಹೋಗಿ ಸಭೆ ನಡೆಸಿಲ್ಲ, ಪಕ್ಷದ ಚೌಕಟ್ಟು ಮೀರಿ ವರ್ತಿಸಿಲ್ಲ. ನಾನು ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸೇರಿದ್ದಕ್ಕೆ ಸಚಿವರು ಬಹಿರಂಗ ವಾಗಿ ಆಕ್ಷೇಪ ವ್ಯಕ್ತಪಡಿಸಲಿ. ಆಗ ನಾನು ಸಹ ನನ್ನ ಸ್ಟೈಲ್ ನಲ್ಲೇ ಉತ್ತರ ಕೊಡುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

Spread the love ವಿಜಯಪುರ :ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ* ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರೈತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ