Breaking News

ಅಂಜಲಿ ಹತ್ಯೆ ಪ್ರಕರಣ ನೇಹಾ ತಂದೆ ಆಪ್ತ ಸಹಾಯಕನ ಕೈವಾಡ ಆರೋಪ

Spread the love

ಹುಬ್ಬಳ್ಳಿ, ಜೂ.08: ಮೇ.15 ರಂದು ಮನೆಗೆ ನುಗ್ಗಿ ಅಂಜಲಿ ಹತ್ಯೆ ಪ್ರಕರಣ (Anjali Ambigera Murder Case)ಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು,

 ಅಂಜಲಿ ಕೊಲೆಯಲ್ಲಿ ವಿಜಯ್ ಅಲಿಯಾಸ್ ಈರಣ್ಣನ‌ ಪಾತ್ರ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆ ನೇಹಾ ತಂದೆ ನಿರಂಜನ ಹಿರೇಮಠ ಅವರ ಆಪ್ತ ಸಹಾಯಕನಾಗಿರುವ ವಿಜಯ್ ಮೇಲೆ ಅಂಜಲಿ ಸಹೋದರಿಯ ಪತಿಯಾದ ಶಿವಕುಮಾರ್ ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯ ಬಸವನಗರದಲ್ಲಿ ಹಲ್ಲೆಗೆ ಯತ್ನಿಸಿದ್ದ.

ಈ ಕುರಿತು ವಿಜಯ್ ಶಿವಕುಮಾರ್ ವಿರುದ್ದ ಬೆಂಡಿಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ.

ವಿಜಯ್​ ಬಂಧಿಸಲು ಅಂಜಲಿ ಸಹೋದರಿ ಯಶೋಧಾ ಆಗ್ರಹ

ಅಂಜಲಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಕೊಲೆಯಲ್ಲಿ ನೇಹಾ ತಂದೆ ನಿರಂಜನ ಆಪ್ತ ಸಹಾಯಕನ ಕೈವಾಡ ಆರೋಪ

ಇನ್ನು ವಿಜಯ್​ನನ್ನು ಕೂಡ ಅರೆಸ್ಟ್ ಮಾಡಬೇಕೆಂದು ಅಂಜಲಿ ಸಹೋದರಿ ಯಶೋಧಾ ಆಗ್ರಹಿಸಿದ್ದರು.

ಇದೀಗ ವಿಜಯ್ ಅಂಗಡಿಗೆ ಹೋದಾಗ ಬೈಕ್ ಅಡ್ಡಗಟ್ಟಿದ ಶಿವಕುಮಾರ್ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎಂದು ವಿಜಯ್​ ಬೆಂಡಿಗೇರಿ ಠಾಣೆಯಲ್ಲಿ ದೂರು ನೀಡಿದ್ದ. ಈ ಹಿನ್ನಲೆ ಸೆಕ್ಷನ್ 341,504 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿ, ಹಲ್ಲೆಗೆ ಮುಂದಾಗಿದ್ದ ಶಿವಕುಮಾರ್​ನನ್ನ ಪೊಲೀಸರು ಬಂಧಿಸಿದ್ದಾರೆ.

ಇದರ ಜೊತೆಗೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಶಿವಕುಮಾರ್ ವಿರುದ್ದ ಕಳ್ಳತನ ಪ್ರಕರಣವು ದಾಖಲಾಗಿದ್ದು, ಶಿವಕುಮಾರ್ ವಿರುದ್ದ ಪೊಲೀಸರು ವಾರೆಂಟ್ ಕೂಡ ಹೊರಡಿಸಿದ್ದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ