Breaking News

ನಿತೀಶ್​​​ಗೆ ಇಂಡಿಯಾ ಬಣದಿಂದ ಬಂದಿತ್ತು ಪ್ರಧಾನಿ ಆಫರ್

Spread the love

ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ (Nitish Kumar) ಅವರು ಇದೀಗ ಡಿಮ್ಯಾಂಡ್​​​ ಮ್ಯಾನ್​​​​, ಇವರು ಇಂಡಿಯಾಕ್ಕೂ ಬೇಕು ಎನ್​ಡಿಎಗೂ ಬೇಕು, ಆದರೆ ನಿತೀಶ್ ಕುಮಾರ್ ಮಾತ್ರ ಎನ್​​ಡಿಎಗೆ ತಮ್ಮ ಬೆಂಬಲ ನೀಡಿದ್ದಾರೆ.

ಪ್ರಧಾನಿ ಮೋದಿ ಆಡಳಿತವನ್ನು ಮೆಚ್ಚಿಕೊಂಡು, ಜತೆಯಾಗಿ ಕೆಲಸ ಮಾಡಬೇಕು ಎಂಬ ಕಾರಣಕ್ಕೆ ಎನ್​​ಡಿಎ ಸೇರಿಕೊಂಡಿದ್ದಾರೆ, ಆದರೆ ಇತ್ತ ಇಂಡಿಯಾ ಒಕ್ಕೂಟ ಅವರಿಗೆ ಪ್ರಧಾನಿ ಸ್ಥಾನ ನೀಡುತ್ತೇವೆ ಎಂದು ಹೇಳಿದ್ದಾರೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ.

ಈ ಹಿಂದೆ ನಿತೀಶ್ ಕುಮಾರ್ ನಮ್ಮ ಜತೆಗೆ ನಿಂತರೇ ನಾವು ಅವರಿಗೆ ಉಪಪ್ರಧಾನಿ ಸ್ಥಾನ ನೀಡುತ್ತೇವೆ ಎಂಬ ಮಾತುಗಳು ಕೇಳಿ ಬರುತ್ತಿತ್ತು.

ಆದರೆ ಇದೀಗ ಜೆಡಿಯು ಪಕ್ಷದ ನಾಯಕ ಕೆಸಿ ತ್ಯಾಗಿ ಅವರು ನಿತೀಶ್ ಅವರಿಗೆ ಇಂಡಿಯಾ ಒಕ್ಕೂಟ ಪ್ರಧಾನಿ ಆಫರ್​​​ ನೀಡಿದ್ದರು ಎಂದು ಹೇಳಿದ್ದಾರೆ.

ಆದರೆ ಅದನ್ನು ನಿತೀಶ್ ದಿಕ್ಕಾರಿಸಿದ್ದಾರೆ. ನಾವು ಎನ್‌ಡಿಎ ಜತೆಗೆ ಹೋಗುತ್ತೇವೆ ಎಂದು ಹೇಳಿದ್ದಾರೆ ಎಂದು ಕೆಸಿ ತ್ಯಾಗಿ ಸಂದರ್ಶನ ಒಂದರಲ್ಲಿ ಹೇಳಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ