Breaking News

ನಾಪೋಕ್ಲು: ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ

Spread the love

ನಾಪೋಕ್ಲು: ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ

ನಾಪೋಕ್ಲು: ಖಾಸಗಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಶಾಲೆಯಿಂದ ವಿದ್ಯಾರ್ಥಿಗಳನ್ನು ನೆಲಜಿ ಗ್ರಾಮಕ್ಕೆ ಕರೆದೊಯ್ದು ಬಸ್ ನೆಲಜಿ ಗ್ರಾಮದಿಂದ ಹಿಂತಿರುಗುವಾಗ ಕುಲ್ಲೇಟಿರ ರಾಜಾ ಎಂಬುವರ ಮನೆ ಸಮೀಪ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು ಆಧಾರವಾಗಿ ನಿಲ್ಲಿಸಿದ ಕಂಬದ ಸಹಾಯದಿಂದ ಭಾರಿ ಅನಾಹುತ ತಪ್ಪಿದೆ. ಬಸ್ಸಿನಲ್ಲಿ ಚಾಲಕ ಮತ್ತು ಕ್ಲೀನರ್ ಮಾತ್ರ ಇದ್ದರು.


Spread the love

About Laxminews 24x7

Check Also

ಕಾಗವಾಡದ ಶಿರಗುಪ್ಪಿ ಸಕ್ಕರೆ ಕಾರ್ಖಾನೆ ಮಾರಾಟ ಮಾಡುವುದಿಲ್ಲ. ಉದ್ದಿಮೆ ಡಾ. ರಮೇಶ್ ದೊಡ್ಡನವರ. ಮಾಹಿತಿ.

Spread the love ಬೆಳಗಾವಿ ಜಿಲ್ಲೆಯ ಇನ್ನಿತರ ಸಕ್ಕರೆ ಕಾರ್ಖಾನೆಗಳನ್ನು ಹೋಲಿಸಿದರೆ ಕಾಗವಾಡದ ಶಿರಗುಪ್ಪಿ ಸಕ್ಕರೆ ಕಾರ್ಖಾನೆ ಚಿನ್ನದಂತೆ ಕಾರ್ಖಾನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ