Breaking News

ಬರ ಮರೆಸಿದ ಮಳೆ; ಬಿತ್ತನೆಗೆ ಸಿದ್ಧತೆ

Spread the love

ರಗುಂದ: ಬರದಿಂದ ತತ್ತರಿಸಿದ್ದ ತಾಲ್ಲೂಕಿನ ರೈತರಿಗೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಹೊಸ ಭರವಸೆ ಮೂಡಿಸಿದೆ. ಕೃಷಿ ಹೊಂಡಗಳು, ಕೆರೆ- ಕಟ್ಟೆಗಳು ಭರ್ತಿಯಾಗಿದ್ದು ಕೃಷಿಕರಲ್ಲಿ ಉತ್ಸಾಹ ತುಂಬಿದೆ.

ಕಳೆದ ಮೂರು ವರ್ಷಗಳಿಂದ ಮುಂಗಾರು ಮಳೆ ಸಕಾಲಕ್ಕೆ ಬಾರದ ಕಾರಣ ರೈತರು ತೊಂದರೆ ಅನುಭವಿಸಿದ್ದರು.

ನರಗುಂದ: ಬರ ಮರೆಸಿದ ಮಳೆ; ಬಿತ್ತನೆಗೆ ಸಿದ್ಧತೆ

ಆದರೆ, ಈ ಬಾರಿ ರೋಹಿಣಿ ಮಳೆ ಸ್ವಲ್ಪ ತಡವಾಗಿ ಸುರಿದರೂ ಬಿತ್ತನೆಗೆ ಅನುಕೂಲ ಕಲ್ಪಿಸಿದೆ. ಮೃಗಶಿರಾ ಆರಂಭದಿಂದಲೇ ಸುರಿಯುತ್ತಿದ್ದು ರೈತರಿಗೆ ನೆಮ್ಮದಿ ಕೊಟ್ಟಿದೆ. ಮಳೆಯಿಂದಾಗಿ ತಾಲ್ಲೂಕಿನ ಕೃಷಿ ಹೊಂಡಗಳು ತುಂಬಿವೆ. ಮುಂದಿನ ದಿನಗಳಲ್ಲಿ ಮಳೆ ಬರುವುದು ಸ್ವಲ್ಪ ಹೆಚ್ಚು ಕಡಿಮೆಯಾದರೂ ಕೃಷಿ ಹೊಂಡಗಳು ಸಹಾಯಕ್ಕೆ ಬರಲಿವೆ ಎಂಬುದು ರೈತರ ಸಂತಸಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ಈ ತಿಂಗಳಿನಿಂದಲೇ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆ

Spread the loveಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ