ಬೈಲಹೊಂಗಲ: ಮುಂಗಾರು ಬಂತೆಂದರೆ ರೈತರಿಗೆ ಜಮೀನುಗಳಿಗೆ ಹೇಗೆ ಹೋಗಬೇಕು, ಹೇಗೆ ಬಿತ್ತನೆ ಮಾಡಬೇಕು ಎಂಬುದೇ ಚಿಂತೆಯಾಗುತ್ತದೆ. ಈ ಬಾರಿ ಕೂಡ ಬೈಲಹೊಂಗಲ ಮತಕ್ಷೇತ್ರದ ಮಾಟೊಳ್ಳಿ ಗ್ರಾಮದ ರೈತರು ಹೊಲಕ್ಕೆ ಹೋಗುವ ದಾರಿ ಇಲ್ಲದೇ ಪರದಾಡುವಂತಾಗಿದೆ.
ಗ್ರಾಮದ ಅಂಗಡಿ ಅವರ ಹೊಲದಿಂದ ಗುಡಿ ಅವರ ಹೊಲದವರೆಗೆ ಈ ಭಾಗದ ರೈತರ ಹೊಲಗಳಿಗೆ ಹೋಗುವ ರಸ್ತೆ ತೀರ ಹದಗೆಟ್ಟಿದ್ದು, ರೈತರ ಗೋಳು ಕೇಳುವರು ಯಾರು ಎಂಬತಾಗಿದೆ.

ಮಳೆ ಆಗಿದ್ದರಿಂದ ಗ್ರಾಮದ ರೈತರ ಜಮೀನುಗಳಿಗೆ ಹೋಗಿ ಬರುವ ರಸ್ತೆ ಮತ್ತಷ್ಟು ಹದಗೆಟ್ಟಿದೆ. ರೈತರು ಕೃಷಿ ಪರಿಕರ, ದವಸ, ಧಾನ್ಯ, ಫಸಲು, ತರಕಾರಿ ತರಲು ಈ ರಸ್ತೆಯಲ್ಲಿ ಹರಸಾಹಸ ಪಡಬೇಕಾಗಿದೆ. ಈ ರಸ್ತೆಯ ಅವ್ಯವಸ್ಥೆ ಕುರಿತು ಮತ್ತು ರಸ್ತೆಯನ್ನು ಸುಧಾರಿಸಲು ಸಂಬಂಧಿಸಿದ ಶಾಸಕರಿಗೆ, ಅಧಿಕಾರಿಗಳಿಗೆ ಲೋಕಸಭೆ ಚುನಾವಣೆ ಪೂರ್ವದಲ್ಲಿ ಮನವಿ ಪತ್ರದ ಮೂಲಕ ವಿನಂತಿ ಮಾಡಲಾಗಿತ್ತು. ಆದರೆ ಯಾರೊಬ್ಬರು ಗಮನ ಕೊಟ್ಟಿಲ್ಲ ಎಂದು ಮ್ಯಾಟೊಳ್ಳಿ ಹಾಗೂ ಸುತ್ತಮುತ್ತಲಿನ ರೈತರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
Laxmi News 24×7