Breaking News

ಆಪ್ತ ಸಹಾಯಕನಿಂದಲೇ ಅನ್ನದಾನೇಶ್ವರ ಮಠದ ಸ್ವಾಮೀಜಿಯ ಬರ್ಬರ ಹತ್ಯೆ

Spread the love

ಮೈಸೂರು, ಜೂ.10- ಆಪ್ತ ಸಹಾಯಕನೇ ಅನ್ನದಾನೇಶ್ವರ ಮಠದ ಸ್ವಾಮೀಜಿಯವರನ್ನು ಬರ್ಭರವಾಗಿ ಹತ್ಯೆ ಮಾಡಿರುವ ಘಟನೆ ನಜರ್‌ಬಾದ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಶಿವಾನಂದ ಸ್ವಾಮೀಜಿ(90) ಕೊಲೆಯಾದ ಹಿರಿಯ ಶ್ರೀಗಳು.

ಕಳೆದ ಹಲವಾರು ವರ್ಷಗಳಿಂದ ರವಿ ಎಂಬಾತ ಸ್ವಾಮೀಜಿಯವರ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದು, ಶ್ರೀಗಳ ಕೆಲಸ ಕಾರ್ಯಗಳಿಗೆ ನೆರವಾಗಿದ್ದ ಸಿದ್ದಾರ್ಥ ನಗರದಲ್ಲಿರುವ ಮಠದಲ್ಲೇ ನೆಲೆಸಿದ್ದು, ಶ್ರೀಗಳ ಯೋಗಕ್ಷೇಮ, ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದ.

ಆಪ್ತ ಸಹಾಯಕನಿಂದಲೇ ಅನ್ನದಾನೇಶ್ವರ ಮಠದ ಸ್ವಾಮೀಜಿಯ ಬರ್ಬರ ಹತ್ಯೆ

ಆದರೆ ಇದ್ದಕ್ಕಿದ್ದಂತೆ ಶ್ರೀಗಳನ್ನು ಕೊಲೆ ಮಾಡಿರುವುದು ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿಬೀಳಿಸಿದೆ. ಶ್ರೀಗಳು ಮಲಗಿದ್ದಾಗ ಕೋಣೆಗೆ ಬಂದ ರವಿ(60) ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ