Breaking News

ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆ, 27.5 ಲಕ್ಷ ರೈತರಿಗೆ ಬರ ಪರಿಹಾರ: ಕೃಷಿ ಸಚಿವ ಮಾಹಿತಿ

Spread the love

ಬೆಂಗಳೂರು, ಜೂನ್​ 10: 5 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾದರೆ, 4 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ (Rain) ಆಗಿದೆ. ಆ ಮೂಲಕ ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ(Krishna Byre Gowda)ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವರ್ಷದ ಮುಂಗಾರು ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಹೀಗಾಗಿ ಮುಂದಿನ 15 ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆ.ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆ, 27.5 ಲಕ್ಷ ರೈತರಿಗೆ ಬರ ಪರಿಹಾರ: ಕೃಷಿ ಸಚಿವ ಮಾಹಿತಿ

ಬರ ಪರಿಹಾರ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಬರ ಪರಿಹಾರವನ್ನು ಸುಪ್ರೀಂ ಕೋರ್ಟ್​ಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ. 7 ಲಕ್ಷ ರೈತರು ಹೊಸದಾಗಿ ಮಳೆಯಾಶ್ರಿತ ಬೆಳೆ ಹೊಂದಿದ್ದರು. ನೀರು ಬರದೆ ಬೆಳೆಹಾನಿ ಆದ ರೈತರಿಗೆ ಪರಿಹಾರ ಕೊಡಲು ತೀರ್ಮಾನ ಮಾಡಿದ್ದೇವೆ ಎಂದರು.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ