Breaking News

ಜೈಲಿನ ಕೈದಿಗಳಿಗೆ ಅಕ್ಷರ ಪಾಠ

Spread the love

ಹಾವೇರಿ: ಅಪರಾಧ ಮಾಡಿ ಜೈಲು ಸೇರಿರುವ ಅನಕ್ಷರಸ್ಥ ಕೈದಿಗಳಿಗೆ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯು ಅಕ್ಷರ ಕಲಿಸುತ್ತಿದೆ. ಪ್ರತಿ ದಿನವೂ ನಡೆಯುವ ವಿಶೇಷ ತರಗತಿಗೆ 29 ವಿಚಾರಣಾಧೀನ ಕೈದಿಗಳು ಹಾಜರಾಗುತ್ತಾರೆ. ಅವರಿಗೆ ಕಲಿಕಾ ಸಾಮಗ್ರಿಗಳನ್ನೂ ಉಚಿತವಾಗಿ ನೀಡಲಾಗುತ್ತದೆ.

ಹಾವೇರಿ: ಜೈಲಿನ ಕೈದಿಗಳಿಗೆ ಅಕ್ಷರ ಪಾಠ

ಶಾಲೆ ಮೆಟ್ಟಿಲು ಹತ್ತದ ಮತ್ತು ಶಿಕ್ಷಣದಿಂದ ವಂಚಿತರಾದ ವಿಚಾರಣಾಧೀನ ಕೈದಿಗಳನ್ನು ಗುರುತಿಸಿರುವ ಇಲಾಖೆ, ಅವರಿಗೆ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಿ, ನುರಿತ ಶಿಕ್ಷಕರಿಂದ ಪಾಠ ಮಾಡಿಸುತ್ತಿದೆ.

ಕಾರಾಗೃಹದಲ್ಲಿ ಗ್ರಂಥಾಲಯವಿದ್ದು, 3 ಸಾವಿರಕ್ಕೂ ಹೆಚ್ಚು ಪುಸ್ತಕಗಳಿವೆ. ಅಲ್ಲಿಯೇ ಪಾಠ ಬೋಧನೆಗೆ ಅವಕಾಶವಿದೆ. ನಿತ್ಯ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ಮತ್ತು ಸಂಜೆ 4 ರಿಂದ 5.30 ರವರೆಗೆ ವಿಶೇಷ ತರಗತಿ ನಡೆಯುತ್ತವೆ.

ಕನ್ನಡ ಓದಲು, ಬರೆಯಲು ಬಾರದ 29 ಕೈದಿಗಳಿಗೆ ಅ, ಆ, ಇ, ಈ ವರ್ಣಮಾಲೆಯಿಂದ ಕಲಿಕೆ ಆರಂಭಿಸಲಾಗಿದೆ. ‘ಸವಿ ಬರಹ’ ಹಾಗೂ ‘ಬಾಳಿಗೆ ಬೆಳಕು’ ಪುಸ್ತಕಗಳನ್ನು ನೀಡಲಾಗಿದೆ ಕನ್ನಡ ಓದಲು, ಬರೆಯಲು ಬರುವುದರ ಜೊತೆಗೆ ಅವರಿಗೆ ಗಣಿತ ಮತ್ತು ಸಾಮಾನ್ಯ ಜ್ಞಾನವೂ ವೃದ್ಧಿ ಆಗಬೇಕು ಎಂಬುದು ವಿಶೇಷ ತರಗತಿಗಳ ಉದ್ದೇಶ.

‘ಕಾರಾಗೃಹದಲ್ಲಿ ಈಚೆಗೆ ಸಮೀಕ್ಷೆ ನಡೆಸಿದಾಗ, ಅನಕ್ಷರಸ್ಥ ಕೈದಿಗಳು ಇರುವುದು ಗೊತ್ತಾಯಿತು. ಅಂಥವರನ್ನು ಗುರುತಿಸಿ, ಪಾಠ ಮಾಡಲಾಗುತ್ತಿದೆ. ಜೂನ್ 23ರಂದು ಸಾಕ್ಷರತಾ ಪರೀಕ್ಷೆ ನಡೆಯಲಿದ್ದು, ಕೈದಿಗಳು ಹಾಜರಾಗುವರು. ಎಲ್ಲರೂ ಉತ್ತೀರ್ಣರಾಗುವ ವಿಶ್ವಾಸವಿದೆ’ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ (ಪ್ರಭಾರ) ಡಾ. ಬಿ.ಎಂ. ಬೇವಿನಮರದ ‘ಪ್ರಜಾವಾಣಿ’ಗೆ ತಿಳಿಸಿದರು.


Spread the love

About Laxminews 24x7

Check Also

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

Spread the loveಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ  37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ 2018 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ