Breaking News

ವಿನಯ ಕುಲಕರ್ಣಿ ವಿರುದ್ಧದ ದೋಷಾರೋಪ ರದ್ದತಿಗೆ ಸುಪ್ರೀಂ ನಕಾರ

Spread the love

ಹುಬ್ಬಳ್ಳಿ,ಜೂ.11- ಬಿಜೆಪಿ ಕಾರ್ಯಕರ್ತ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ರಾಜ್ಯದ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ನಿಗದಿಯಾಗಿರುವ ದೋಷಾರೋಪವನ್ನು ರದ್ದುಪಡಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ.

2016ರಲ್ಲಿ ಧಾರವಾಡದಲ್ಲಿ ಯೋಗೇಶ್‌ ಅವರನ್ನು ಹತ್ಯೆ ಮಾಡಲಾಗಿತ್ತು.ವಿನಯ ಕುಲಕರ್ಣಿ ವಿರುದ್ಧದ ದೋಷಾರೋಪ ರದ್ದತಿಗೆ ಸುಪ್ರೀಂ ನಕಾರ

ನ್ಯಾಯಮೂರ್ತಿಗಳಾದ ಸಂಜಯ್‌ಕುಮಾರ್‌ ಮತ್ತು ಆಗಸ್ಟೀನ್‌ ಜಾರ್ಜ್‌ ಮಸೀಹ್‌ ಅವರು ಇದ್ದ ರಜಾಕಾಲದ ವಿಭಾಗೀಯ ಪೀಠವು ಕರ್ನಾಟಕ ಹೈಕೋರ್ಟ್‌ ನೀಡಿದ ಆದೇಶದಲ್ಲಿ ಮಾರ್ಪಾಡು ಮಾಡಲು ನಿರಾಕರಿಸಿತ್ತು.

ಕುಲಕರ್ಣಿ ಅವರ ವಿರುದ್ಧ ವಿಶೇಷ ನ್ಯಾಯಾಲಯವು ದೋಷಾರೋಪ ನಿಗದಿ ಮಾಡಿರುವುದರಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್‌ ಏಪ್ರಿಲ್‌ 8ರಂದು ನಿರಾಕರಿಸಿತ್ತು. ವಿಚಾರಣೆಯನ್ನು ಪೂರ್ಣಗೊಳಿಸಿ, ಕ್ರಿಮಿನಲ್‌ ಪ್ರಕರಣವನ್ನು ಸಾಧ್ಯವಾದಷ್ಟುಮಟ್ಟಿಗೆ ಮೂರು ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತ್ತು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ